
ಕನಗನಮರಡಿ ಬಳಿ ಬಸ್ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಸ್ ಚಾಲಕ ಹೊಳಲು ಶಿವಣ್ಣ ಎಂಬಾತನನ್ನು ನಿನ್ನೆ(ಡಿ.09) ಪೊಲೀಸರು ಬಂಧಿಸಿದ್ದು ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನ.24ರಂದು ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ 30 ಮಂದಿ ಪ್ರಾಣ ಕಳೆದುಕೊಂಡಿದ್ದರು. ಬಸ್ ಚಾಲಕ ಮತ್ತು ಕಂಡಕ್ಟರ್ ಇಬ್ಬರು ಪ್ರಾಣಾಪಾಯದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದರು. ಪೊಲೀಸರು ನಿನ್ನೆ ಪಾಂಡವಪುರ ಬಳಿ ಶಿವಣ್ಣನನ್ನು ಬಂಧಿಸಿದ್ದರು.
ಘಟನೆ ನಡೆದು 15 ದಿನಗಳ ಬಳಿಕ ಬಸ್ ಚಾಲಕ ಪಾಂಡವಪುರ ಪೊಲೀಸರ ಬಲೆಗೆ ಬಿದ್ದಿದ್ದು, ಇಂದು ಮಂಡ್ಯ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








