ಜೆಡಿಎಸ್ ಮುಖಂಡ ನೇಣಿಗೆ ಶರಣು

ಮಂಡ್ಯ:

      ಸಾಲಬಾಧೆ ತಾಳಲಾರದೆ ಜೆಡಿಎಸ್ ಮುಖಂಡರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದಲ್ಲಿ ಮಂಗಳವಾರ ನಡೆದಿದೆ.

      ಚಿಕ್ಕಗೌಡನದೊಡ್ಡಿ ನಿವಾಸಿ ಲೋಕೇಶ್(32) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ನಗರ ಸಭೆ ಚುನಾವಣೆಯಲ್ಲಿ 34ನೇ ವಾರ್ಡ್ ನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. 

      ಲೋಕೇಶ್​ ಮಹೀಂದ್ರಾ ಟ್ರ್ಯಾಕ್ಟರ್​ ಶೋರೂಂ ನಡೆಸುತ್ತಿದ್ದರು. ತನ್ನ ಶೋ ರೂಂ ಸಲುವಾಗಿ 5 ಕೋಟಿ ರೂ ಸಾಲ ಮಾಡಿಕೊಂಡಿದ್ದರು. ಆದರೆ ವ್ಯವಹಾರದಲ್ಲಿ ನಷ್ಟ ಉಂಟಾಗಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದರು. ಇಂದು ಸ್ವರ್ಣಸಂದ್ರದ ಕೈಗಾರಿಕಾ ಪ್ರದೇಶದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಂಡ್ಯ ಪೂರ್ವ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap