ಕಲಬುರ್ಗಿ : ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದ 15 ಮಂದಿ ಬಂಧನ!!

ಕಲಬುರ್ಗಿ : 

     ರಾಜ್ಯದಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದರೂ ಅದನ್ನು  ಉಲ್ಲಂಘಿಸಿ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ 15 ಜನರನ್ನು ಸೇಡಂ ಪೊಲೀಸರು ಬುಧವಾರ ಬಂಧಿಸಿದ್ದಾರೆ.

     ರಂಜಾನ್ ತಿಂಗಳು ಆಗಿರುವ ಕಾರಣ ಸೇಡಂ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಮಸೀದಿಯಲ್ಲಿ 15 ಮಂದಿ ಮಸೀದಿಗೆ ತೆರಳಿ ಪ್ರಾರ್ಥನೆ ಮಾಡುತ್ತಿದ್ದರು. ಈ ವೇಳೆ ಅದನ್ನು ಗಮನಿಸಿದ ಸ್ಥಳೀಯರು ಪೊಲೀಸರ ಗಮನಕ್ಕೆ ತಂದರು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಲಾಟಿ ಏಟು ನೀಡಿ, ಎಲ್ಲರನ್ನು ಬಂಧಿಸಿದ್ದಾರೆ.

      ಲಾಕ್‌ಡೌನ್ ಸಮಯದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವುದನ್ನು ನಿಷೇಧಿಸಿದ್ದು, ನಿಯಮ ಪಾಲಿಸದ ಕಾರಣ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap