ಕೂಡಲಸಂಗಮದಲ್ಲಿ ಮಾತೆಮಹಾದೇವಿ ಕ್ರಿಯಾಸಮಾಧಿ!

ಬೆಂಗಳೂರು:

      ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೂಡಲ ಸಂಗಮದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರು ಇಂದು ಲಿಂಗೈಕ್ಯರಾಗಿದ್ದು, ನಾಳೆ ಕೂಡಲ ಸಂಗಮದಲ್ಲಿ ಅಂತಿಮ ವಿಧಿ ವಿಧಾನ ನೆರವೇರಲಿದೆ.

      ಶರಣ ಮಾತೆ ಮಹಾದೇವಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನಾಳೆ ಬೆಳಗ್ಗೆ 10 ಗಂಟೆವರೆಗೂ ರಾಜಾಜಿನಗರದಲ್ಲಿರುವ ಬಸವ ಮಂಟಪದಲ್ಲಿ ವ್ಯವಸ್ಥೆ ಮಾಡಲಾಗಿದೆ. ನಂತರ ಇಂದು ಬೆಳಗ್ಗೆ 11 ಗಂಟೆಗೆ ಕೂಡಲ ಸಂಗಮಕ್ಕೆ ರವಾನಿಸಲು ಮಠದ ಸಿಬ್ಬಂದಿ ತೀರ್ಮಾನ ಮಾಡಿದ್ದು, ಪಾರ್ಥಿವ ಶರೀರವನ್ನು ಹಿರಿಯೂರು, ಚಳ್ಳಕೆರೆ, ನಾಯಕನಹಟ್ಟಿ, ಚಿತ್ರದುರ್ಗ ಮಾರ್ಗವಾಗಿ ಕೂಡಲಸಂಗಮಕ್ಕೆ ಕೊಂಡೊಯ್ಯಲಾಗುವುದು. ಇದರ ಮಧ್ಯೆ ಮೊದಲು ಚಿತ್ರದುರ್ಗದಲ್ಲಿ ಭಕ್ತರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

      ನಾಳೆ (ಶನಿವಾರ) ಮಧ್ಯಾಹ್ನ 1 ಗಂಟೆವರೆಗೂ ಅಂತಿಮ ನಮನಕ್ಕೆ ವ್ಯವಸ್ಥೆ ಕಲ್ಪಿಸಿ, ಬಳಿಕ ಕೂಡಲ ಸಂಗಮದಲ್ಲಿ ಬಸವಧರ್ಮದ ವಿಧಿ-ವಿಧಾನಗಳಂತೆ ಮೂಲಕ  ಮಾತೇ ಮಹಾದೇವಿ ಅಂತ್ಯಕ್ರಿಯೆ ನಡೆಯಲಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link