‘ಡಿಕೆಶಿ ಅಣ್ಣನವರೇ ನನ್ನನ್ನು ಕ್ಷಮಿಸಿ’- ಶ್ರೀರಾಮುಲು

ಬೆಂಗಳೂರು :

      ನನ್ನ ಮಾತಿನಿಂದ ನೋವಾಗಿದ್ದರೆ ಡಿಕೆಶಿ ಅಣ್ಣನವರೇ ಕ್ಷಮಿಸಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ಡಿ.ಕೆ.ಶಿವಕುಮಾರ್ ಬಳಿ ಬಹಿರಂಗ ಕ್ಷಮೆ ಯಾಚಿಸಿದ್ದಾರೆ.

       ಅಕ್ರಮ ಹಣ ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಟ್ಟಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸೋಮವಾರ ಕಣ್ಣೀರು ಹಾಕಿದ್ದರು. ಈ ವೇಳೆ ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಹೇಳಿಕೆ ನೀಡಿದ್ದರು.

      ಈ ಕುರಿತು ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು, ನನ್ನ ಮಾತಿನಿಂದ ನೋವಾಗಿದ್ದರೆ ಡಿಕೆಶಿ ಅಣ್ಣನವರೇ ಕೈ ಮುಗಿದು ಕೇಳುತ್ತೇನೆ. ನನ್ನನ್ನು ಕ್ಷಮಿಸಿ, ನನ್ನ ಭಾಷೆ ರಾಜಕಾರಣಕ್ಕೆ ಸೀಮಿತವೇ ಹೊರತು ವೈಯಕ್ತಿಕ ಅಲ್ಲ, ಡಿಕೆಶಿ ಅಣ್ಣನಿಗೆ ರಾಜಕೀಯವಾಗಿ ಮಾತ್ರ ಮಾತನಾಡಿದ್ದು ಎಂದು ಹೇಳಿದ್ದಾರೆ.

      ಇನ್ನು ದೆಹಲಿಯಲ್ಲಿ ನಿನ್ನೆ ಮಾತನಾಡಿದ ಡಿ.ಕೆ.ಶಿವಕುಮಾರ್, ನನ್ನ ಮಿತ್ರರು ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಹೇಳಿದ್ದಾರೆ. ನಾನು ಉಪ್ಪು ತಿಂದರೆ ನೀರು ಕುಡಿಯಲು ಸಿದ್ಧ ಎಂದು ಹೇಳಿದ್ದರು. ಈ ವೇಳೆ ಕುಟುಂಬದವರನ್ನು ನೆನೆದು ಕಣ್ಣೀರು ಹಾಕಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap