ಸಚಿವ ಸಿ.ಎಸ್ ಶಿವಳ್ಳಿ ಇನ್ನಿಲ್ಲ!!

ಹುಬ್ಬಳ್ಳಿ:

  ಪೌರಾಡಳಿತ ಸಚಿವ ಸಿ.ಎಸ್.​​ ಶಿವಳ್ಳಿ ಅವರು ಹೃದಯಾಘಾತದಿಂದ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ, ಹೃದಯಾಘಾತ ಸಂಭವಿಸಿದ ತಕ್ಷಣ ಅವರನ್ನು ಹುಬ್ಬಳ್ಳಿಯ ಲೈಫ್​ಲೈನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ.

      ಮುಂಜಾನೆ ವಾಂತಿ-ಭೇದಿಯಿಂದ ಅಸ್ವಸ್ಥರಾಗಿದ್ದ ಸಚಿವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಹೃದಯಾಘಾತವಾದ ನಂತರ ಆರೋಗ್ಯ ಸ್ಥಿತಿ ಗಂಭೀರ ಸ್ವರೂಪದಲ್ಲಿದ್ದ ಕಾರಣ ಲೈಫ್ ಲೈನ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಲಾತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link