ಬೆಳಗಾವಿ:![](https://prajapragathi.com/wp-content/uploads/2019/04/amar-jarakiholi.gif)
![](https://prajapragathi.com/wp-content/uploads/2019/04/amar-jarakiholi.gif)
ಕಾಂಗ್ರೆಸ್ನಲ್ಲಿ ಧೂಳೆಬ್ಬಿಸಿರುವ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಅಮರ್ ಜಾರಕಿಹೊಳಿ ರಾಜಕೀಯ ಪ್ರವೇಶಿಸಿದ್ದಾರೆ.
ಬೆಳಗಾವಿಯ ಕೆಎಂಎಫ್ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಮರ್ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದು, ಸಹೋದರ ಬಾಲಚಂದ್ರ ಜಾರಕಿಹೊಳಿ ನೆರವಿನಿಂದ ರಮೇಶ್ ಜಾರಕಿಹೊಳಿ, ಪುತ್ರನನ್ನು ರಾಜಕೀಯಕ್ಕೆ ಕರೆ ತಂದಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಸದ್ಯ ಸುದ್ದಿಯಲ್ಲಿದ್ದಾರೆ. ರಮೇಶ್ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆಂದು ಹೇಳಲಾಗುತ್ತಿದ್ದು, ಇದರ ಮಧ್ಯೆ ಅವರ ಪುತ್ರ ಅಮರ್ ಜಾರಕಿಹೊಳಿ ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಕಳೆದ ಒಂದು ವರ್ಷದಿಂದ ತಂದೆ ರಮೇಶ್ ಜಾರಕಿಹೊಳಿ ಜೊತೆ ಸಾರ್ವಜನಿಕವಾಗಿ ಅಮರ್ ಜಾರಕಿಹೊಳಿ ಕಾಣಿಸಿಕೊಳ್ಳುತ್ತಿದ್ದಾರೆ.
ಏಪ್ರಿಲ್ 21ರಂದು ಏಳು ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಅಮರ್ ಜಾರಕಿಹೊಳಿ ಸೇರಿದಂತೆ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದ 7 ನಿರ್ದೇಶಕ ಸ್ಥಾನಗಳಿಗೆ ಏಪ್ರಿಲ್ 28ರಂದು ಚುನಾವಣೆ ನಡೆಯಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/04/amar-jarakiholi.gif)