ಕೊಪ್ಪಳ:

ಅಂಗನವಾಡಿ ಕೇಂದ್ರದಲ್ಲಿ ಪಾಯಸ ಕುಡಿದ 11 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಿಪ್ಪನಾಳ ಗ್ರಾಮದಲ್ಲಿ ನಡೆದಿದೆ.
ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಪಾಯಸ ವಿತರಿಸಲಾಗಿತ್ತು ಎಂದು ತಿಳಿದುಬಂದಿದ್ದು, ಬಳಿಕ ಪಾಯಸ ಕುಡಿದ ಮಕ್ಕಳಿಗೆ ವಾಂತಿ ಭೇದಿ ಹಾಗೂ ಜ್ವರ ಕಾಣಿಸಿಕೊಂಡಿದೆ.
ಅಸ್ವಸ್ಥರಾಗಿದ್ದ ಮಕ್ಕಳನ್ನು ಸ್ಥಳೀಯ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಮಾಹಿತಿ ನೀಡಿದ ಜಿಲ್ಲಾಸ್ಪತ್ರೆಯ ವೈದ್ಯರು ಮಕ್ಕಳು ಗುಣಮುಖರಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
