ಬಸ್ ಟೈರ್ ಸ್ಫೋಟ: ನಾಲ್ವರಿಗೆ ಗಾಯ!!

ಚಿಕ್ಕಬಳ್ಳಾಪುರ:

      ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮುಂಭಾಗದ ಟೈರ್ ಸ್ಫೋಟಗೊಂಡು ಬಸ್ ಅಪಘಾಕ್ಕೀಡಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7 ರ ಐಟಿಐ ಕಾಲೇಜು ಬಳಿ ನಡೆದಿದೆ.

      ದೊಡ್ಡಬಳ್ಳಾಪುರ ನಗರದಿಂದ ಚಿಕ್ಕಬಳ್ಳಾಪುರ ಮಾರ್ಗವಾಗಿ ಅನಂತಪುರಕ್ಕೆ ತೆರಳುತ್ತಿತ್ತು. ಈ ವೇಳೆ ಕೆಎಸ್‌ಆರ್‌ಟಿಸಿ ಬಸ್‍ನ ಟೈರ್ ಸ್ಫೋಟಗೊಂಡಿದ್ದು, ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ಅಲ್ಲದೆ ಬಸ್ ರಸ್ತೆ ಬದಿ ನಿರ್ಮಿಸಲಾಗಿದ್ದ ಜಾಹೀರಾತು ನಾಮಫಲಕದ ಕೆಳಗೆ ಇದ್ದ ಖಾಲಿ ಕಂಟೈನರ್ ಗೆ ಗುದ್ದಿದೆ. ಪರಿಣಾಮ ಕಂಟೈನರ್ ಮನೆಗೆ ಡಿಕ್ಕಿಗೆ ಹೊಡೆದಿದೆ.

     ಈ ಅವಘಡದಿಂದಾಗಿ ಚಾಲಕ, ನಿರ್ವಾಹಕ ಹಾಗೂ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳು ಬಾಗೇಪಲ್ಲಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link
Powered by Social Snap