ಸಿಎಂ ಭರವಸೆಯಿಂದ ಎಂಟಿಬಿ ನಾಗರಾಜ್ ಸಿಟ್ಟು ಶಮನ!!?

ಬೆಂಗಳೂರು :

      ಉಪ ಚುನಾವಣೆಯಲ್ಲಿ ಸೋಲಿನ ಕಹಿ ಅನುಭವಿಸಿದ್ದರಿಂದ ಸಚಿವ ಸ್ಥಾನ ಸಿಗುವುದಿಲ್ಲ ಎಂಬ ಕಾರಣಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ಕೋಪ ಇದ್ದಕ್ಕಿದ್ದ ಹಾಗೆ ತಣ್ಣಗಾಗಿದೆ.

     ಸಚಿವ ಸ್ಥಾನ ಕೈ ತಪ್ಪುವ ಹಿನ್ನೆಲೆ ಕಿಡಿಕಾರುತ್ತಿದ್ದ ಎಂಟಿಬಿ ನಾಗರಾಜ್​ ಮನವೊಲಿಸುವಲ್ಲಿ ಮುಖ್ಯಮಂತ್ರಿಗಳು ಯಶಸ್ವಿಯಾಗಿದ್ದು, ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ನೀಡುವ ಭರವಸೆ ನೀಡಿದ್ದಾರೆ. ಇದರಿಂದಾಗಿ ಎಂಟಿಬಿ ಸಿಟ್ಟು ಶಮನವಾಗಿದೆ ಎನ್ನಲಾಗಿದೆ.

Image result for yeddyurappa and mtb"

      ಸದ್ಯ ಸಚಿವ ಸಂಪುಟ ವಿಸ್ತರಣೆ ಕಾರ್ಯ ಮುಗಿಯಲಿ, ಇದಾದ ಬಳಿಕ ಉನ್ನತ ಸ್ಥಾನಮಾನ ನೀಡಲಾಗುವುದು. ಅಲ್ಲಿಯವರೆಗೂ ಕೆಲಕಾಲ ಕಾಯಿರಿ ಎಂದು ಸಿಎಂ ಭರವಸೆ ನೀಡಿದ್ದಾರೆ. ಇದರ ಜೊತೆಗೆ ಆರ್​ ಶಂಕರ್​ ಅವರಿಗೂ ವಿಧಾನ ಪರಿಷತ್​ ಸದಸ್ಯರನ್ನಾಗಿ ಮಾಡಿ, ಸಚಿವ ಸ್ಥಾನ ನೀಡಲಾಗುವುದು ಎಂದು ಕೂಡ ತಿಳಿಸಿದ್ದಾರೆ.

      ಹೌದು, ಸೋತವರಿಗೆ ಸ್ಥಾನ ನೀಡಿದರೆ ಮೂಲ ಬಿಜೆಪಿ ನಾಯಕರಿಂದ ವಿರೋಧ ವ್ಯಕ್ತವಾಗಲಿದೆ ಎಂದ ಅರಿತ ಸಿಎಂ ಗೆದ್ದವರಿಗೆ ಮಾತ್ರ ಸಚಿವ ಸ್ಥಾನದ ಭರವಸೆ ನೀಡಿದ್ದರು. ಇದು ಎಂಟಿಬಿ ನಾಗರಾಜ್​ ಹಾಗೂ ಎಚ್​.ವಿಶ್ವನಾಥ್​ ಗೆ ಅಸಮಾಧಾನ ತಂದಿತ್ತು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap