ರಾಯಚೂರು: ದೇವಸ್ಥಾನದ ಬಳಿಯೇ ವ್ಯಕ್ತಿಯ ಬರ್ಬರ ಹತ್ಯೆ!

ರಾಯಚೂರು:

      ದೇವರ ದರ್ಶನಕ್ಕೆ ಬಂದ ವ್ಯಕ್ತಿಯನ್ನು ಮಚ್ಚಿನಿಂದ ಕೊಲೆ ಮಾಡಿದ ಕೃತ್ಯ ತಾಲೂಕಿನ ಪುಚ್ಚಲದಿನ್ನಿಯಲ್ಲಿ ನಡೆದಿದೆ.

      ನಂದಯ್ಯ ಸ್ವಾಮಿ (40) ಹತ್ಯೆಯಾದ ವ್ಯಕ್ತಿ. ಗ್ರಾಮದ ದೇವಾಲಯದ ಬಳಿ ಕುಳಿತುಕೊಂಡಿದ್ದ ವೇಳೆ ಚನ್ನಯ್ಯ ಸ್ವಾಮಿ ಎಂಬಾತ ಕುಡುಗೋಲಿನಿಂದ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.  ಕೊಲೆಗೈದಾತ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದೆ.

     ಕೃತ್ಯವೆಸಗಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಗಿಡಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಕಾಂಪೌಂಡ್​ ವಿಚಾರಕ್ಕೆ ಕೊಲೆ ನಡೆದಿದೆ ಎನ್ನಲಾಗಿದ್ದು, ನಿಖರವಾದ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

       ಸ್ಥಳಕ್ಕೆ ಇಡಪನೂರು ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

 

Recent Articles

spot_img

Related Stories

Share via
Copy link
Powered by Social Snap