ನಡುರಸ್ತೆಯಲ್ಲಿ ಆಟೋ ಚಾಲಕನ ಬರ್ಬರ ಹತ್ಯೆ!!

ಮೈಸೂರು:

      ನಡುಬೀದಿಯಲ್ಲೇ ದುಷ್ಕರ್ಮಿಗಳು ಆಟೋ ಚಾಲಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

      ನಗರದ ಮಹರಾಜ ಗ್ರೌಂಡ್​ ಸಮೀಪ ಫೈಯರ್ ಬ್ರಿಗೇಡ್ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಮುನೇಶ್ವರ ನಗರದ ನಿವಾಸಿ ಆಟೋ ಚಾಲಕ ಮನು ಕೊಲೆಯಾದ ವ್ಯಕ್ತಿ.

      ಸರಸ್ವತಿಪುರಂನ ಅಗ್ನಿ ಶಾಮಕ ಠಾಣೆ ಮುಂಭಾಗ ಇರುವ ರೈಲ್ವೆ ಬ್ರಿಡ್ಜ್ ಕೆಳಗಡೆ ಈ ಕೊಲೆ ನಡೆದಿದ್ದು, ಲಾಂಗು ಮಚ್ಚುಗಳಿಂದ ಗುರುತು ಸಿಗದ ರೀತಿಯಲ್ಲಿ ಹಲ್ಲೆ ಮಾಡಿದ್ದು, ಚಾಕುವನ್ನು ಬೆನ್ನಿನಲ್ಲೇ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

      ಘಟನೆಗೆ ಕಾರಣವೇನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲವಾದರೂ, ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap