ಮೈಸೂರು :
ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಗೆ ಅಧಿಕಾರೇತರ ಸದಸ್ಯರಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಹೋದರಿಯ ಪುತ್ರ ಎಚ್.ಸಿ.ಅಶೋಕ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೈಸೂರಿನ ನಿವಾಸಿಯಾಗಿರುವ ಅಶೋಕ್, ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಹಾಲು ಒಕ್ಕೂಟದ ಆಡಳಿತ ಮಂಡಳಿಗೆ ಅಧಿಕಾರೇತರ ಸದಸ್ಯರಾಗಿ ನೇಮಕಗೊಂಡಿದ್ದರು.
ಅಜ್ಜಿಗೆ ಅರಿವೆ ಚಿಂತೆ ಆದ್ರೆ ಮೊಮ್ಮಗಳಿಗೆ ಮದುವೆ ಚಿಂತೆಯಂತೆ ಹಾಗೆಯೇ ಉತ್ತರ ಕರ್ನಾಟಕದ ಜನ ಪ್ರವಾಹದಿಂದ ತತ್ತರಿಸುತ್ತಿದ್ದಾರೆ ಇತ್ತ ಯಡಿಯೂರಪ್ಪ ನವರು ತಂಗಿ ಮಗನಿಗೆ ಹಾಲು ಉತ್ಪಾದಕರ ಒಕ್ಕೂಟಕ್ಕೆ ನೇಮಕಾತಿ ಮಾಡೋದ್ರಲ್ಲಿ ನಿರತರಾಗಿದ್ದಾರೆ. pic.twitter.com/px5xhInSGI
— Janata Dal Secular (@JanataDal_S) August 8, 2019
ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಸಹೋದರಿಯ ಪುತ್ರನಿಗೆ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿರುವುದಕ್ಕೆ ಜೆಡಿಎಸ್ ಕಿಡಿಕಾರಿದೆ. ಉತ್ತರ ಕರ್ನಾಟಕದ ಜನ ನೆರೆಹಾವಳಿಯಿಂದ ತತ್ತರಿಸುತ್ತಿದ್ದರೆ, ಸಿಎಂ ತಮ್ಮ ಸಂಬಂಧಿಕರಿಗೆ ಅಧಿಕಾರ ಹಂಚುವುದರಲ್ಲಿ ನಿರತರಾಗಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ಟೀಕಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ