ಮೈಸೂರು : ದಸರಾ ಯಶಸ್ಸಿನ ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ!!

ಮೈಸೂರು :  

    ನಾಡಹಬ್ಬ ಮೈಸೂರು ದಸರಾ ಯಶಸ್ಸಿಗಾಗಿ ಹರಕೆ ಹೊತ್ತಿದ್ದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಕುಟುಂಬ ಸದಸ್ಯರೊಂದಿಗೆ ಹರಕೆ ತೀರಿಸಿದ್ದಾರೆ. 

    ರೋಹಿಣಿ ಸಿಂಧೂರಿ ಅವರು ಮೈಸೂರು ದಸರಾ ಮಹೋತ್ಸವ ಕೆಲವೇ ದಿನಗಳಿರುವಾಗ ಮೈಸೂರು ಜಿಲ್ಲಾಧಿಕಾರಿಯಾಗಿ ಬಂದಿದ್ದರು. ಮೈಸೂರು ದಸರಾ ಉತ್ಸವ ಸುಸೂತ್ರವಾಗಿ ನಡೆಯುವಂತೆ ಆಶಿಸಿ ಹರಕೆ ಹೊತ್ತಿದ್ದ ಅವರು ಪಲ್ಲಕ್ಕಿ ರಥ ಎಳೆದು ಹರಕೆ ತೀರಿಸಿದ್ದಾರೆ.

     ಸೋಮವಾರ ದಸರಾ ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಸಾಯಂಕಾಲ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕುಟುಂಬ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು. 

‌     ನಾಡಿನ ಅಧಿ ದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ತಂದೆ, ತಾಯಿ, ಪತಿ ಹಾಗೂ ಮಗುವಿನೊಂದಿಗೆ ಚಾಮುಂಡಿಯ ಪಲ್ಲಕ್ಕರಿ ರಥವನ್ನು ಎಳೆದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap