ಮೈಸೂರು :
ಇಂದಿನಿಂದ ಮೈಸೂರು ಜಿಲ್ಲೆಯ ಪ್ರವಾಸಿ ತಾಣಗಳನ್ನು ಓಪನ್ ಮಾಡುವಂತೆ ಸಚಿವ ಎಸ್.ಟಿ. ಸೋಮಶೇಖರ್ ಘೋಷಣೆ ಮಾಡಿದ್ದಾರೆ.
ಈ ಮೊದಲು ಕೋವಿಡ್ – 19 ಹಿನ್ನೆಲೆ ಕೆಆರ್ ಎಸ್, ಮೈಸೂರು ಮೃಗಾಲಯ, ಚಾಮುಂಡಿ ಬೆಟ್ಟ ಹಾಗೂ ಅರಮನೆಗಳಿಗೆ ನವಂಬರ್ 1 ರವರೆಗೆ ಜಿಲ್ಲಾಡಳಿತ ಪ್ರವೇಶ ನಿರ್ಬಂಧ ಹೇರಲಾಗಿತ್ತು.
ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿದ ಕ್ರಮವನ್ನು ಮೈಸೂರು ಹೋಟೆಲ್ ಮಾಲಿಕರು, ಕ್ಯಾಬ್ ಚಾಲಕರು, ಟ್ಯಾಕ್ಸಿ ಚಾಲಕರು, ಟೂರಿಸ್ಟ್ ಗೈಡ್, ಆಟೋ ಚಾಲಕರು ಸೇರಿದಂತೆ ಹಲವು ಸಂಘಗಳು ಖಂಡಿಸಿ, ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದವು.
ಜಿಲ್ಲಾಡಳಿತದ ಕ್ರಮವನ್ನು ಮುಖ್ಯಮಂತ್ರಿಗಳು ಹಿಂಪಡೆಯುವಂತೆ ಸೂಚಿಸಿದ್ದುಮ ಮುಖ್ಯಮಂತ್ರಿಗಳು ಶುಕ್ರವಾರ ಸಭೆ ನಡೆಸುವ ವೇಳೆ ಈ ಬಗ್ಗೆ ವಿವರಣೆ ಪಡೆದು, ಈ ಆದೇಶವನ್ನು ಹೊರಡಿಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ ಮಾಸ್ಕ್ ಗಳನ್ನು ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಎಲ್ಲರಿಗೂ ಪ್ರವೇಶವನ್ನು ನೀಡಲು ಸೂಚನೆ ನೀಡಿದ್ದಾರೆಂದು ಸಚಿವ ಸೋಮಶೇಖರ್ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
