ಆಪರೇಷನ್ ಕಮಲದ ರೂವಾರಿ ಮೋದಿಯಲ್ಲ, ಬಿ.ಎಸ್.ವೈ!!?

ಬೆಂಗಳೂರು:

      ಆಪರೇಷನ್ ಕಮಲದ ಹಿಂದಿರುವುದು ಪ್ರಧಾನಿ ನರೇಂದ್ರ ಮೋದಿಯಲ್ಲ, ಬದಲಾಗಿ ಮಾಜಿ ಸಿಎಂ ಯಡಿಯೂರಪ್ಪ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಆರೋಪಿಸಿದ್ದಾರೆ.

      ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಭೇಟಿಯ ನಂತರ ಮಾತನಾಡಿದ ದೇವೇಗೌಡರು,”ಮೂರು ದಿನದ ಮಟ್ಟಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತ ಕಾರಣ ಬಿ.ಎಸ್​. ಯಡಿಯೂರಪ್ಪ ಅವರು ಕಾಂಗ್ರೆಸ್​ ಮತ್ತು ಜೆಡಿಎಸ್​ ಪಕ್ಷದ ಶಾಸಕರನ್ನು ಖರೀದಿಸಲು ಯತ್ನಿಸುತ್ತಿದ್ದಾರೆ. ಈ ಆಪರೇಷನ್​ ಯತ್ನದ ಹಿಂದೆ ಕೇಂದ್ರದ ಯಾವೊಬ್ಬ ನಾಯಕರೂ ಇಲ್ಲ. ಯಡಿಯೂರಪ್ಪ ಅವರೇ ಅಧಿಕಾರ ವ್ಯಾಮೋಹಕ್ಕೆ ಬಿದ್ದು ಈ ರೀತಿ ಮಾಡುತ್ತಿದ್ಧಾರೆ,” ಎಂದು ಎಚ್​.ಡಿ. ದೇವೇಗೌಡ ಹೇಳಿದ್ದಾರೆ.

      ಅಧಿವೇಶನದಲ್ಲೇ ಮೈತ್ರಿ ಸರ್ಕಾರವನ್ನ ಉರುಳಿಸಲು ಬಿಜೆಪಿ ತಂತ್ರಗಾರಿಕೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಜೊತೆಗೆ ಸಿಎಂ ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ. 
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap