ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ಯುವಘಟಕದ ಜವಾಬ್ಧಾರಿ!!

ಬೆಂಗಳೂರು :

      ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸೋಲನ್ನಪ್ಪಿದ್ದ ಸಿಎಂ ಪುತ್ರ ಹಾಗೂ ಮೊಮ್ಮಗ ನಿಖಿಲ್ ಕುಮಾರಸ್ವಾಮಿಯವರನ್ನು ಪ್ರದೇಶ ಯುವ ಜನಾತಾದಳದ ಅಧ್ಯಕ್ಷರನ್ನಾಗಿ ಮಾಡಲಾಗಿದೆ.

    ಜೆಡಿಎಸ್‌ ವರಿಷ್ಟ ಹೆಚ್.ಡಿ. ದೇವೇಗೌಡ, ಪಕ್ಷದ ಕಛೇರಿಯಲ್ಲಿ ಇಂದು ಈ ಕುರಿತು ಅಧಿಕೃತವಾಗಿ ಘೋಷಣೆ ಮಾಡಿದ್ದು, ಸಚಿವರಾದ ಹೆಚ್ ಕೆ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಅಧ್ಯಕ್ಷರನ್ನಾಗಿ, ಉಪಾಧ್ಯಕ್ಷರಾಗಿ ಶಾಸಕ ಗೋಪಾಲಯ್ಯ ಮತ್ತು ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಅವರನ್ನು ನೇಮಿಸಲಾಗಿದೆ. ಹಾಗೂ ಜೆಡಿಎಸ್​ ಯುವ ಘಟಕದ ಅಧ್ಯಕ್ಷರಾಗಿ ನಿಖಿಲ್​ ಕುಮಾರಸ್ವಾಮಿ ಅವರನ್ನು ನೇಮಿಸಲಾಗಿದೆ ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರು ಘೋಷಿಸಿದರು.

      ಇದೇ ವೇಳೆ ಕರ್ನಾಟಕ ಪ್ರದೇಶ ಯುವ ಜನತಾದಳದ ವಿಭಾಗಕ್ಕೂ ನೇಮಕಾತಿ ಮಾಡಲಾಗಿದ್ದು, ನಿಖಿಲ್ ಕುಮಾರಸ್ವಾಮಿಯವರನ್ನು ಪ್ರದೇಶ ಯುವ ಜನಾತಾದಳದ ಅಧ್ಯಕ್ಷರನ್ನಾಗಿ ಮಾಡಲಾಗಿದೆ.ಎನ್ ಎಂ ನೂರ್ ಅಹ್ಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ, ಶರಣ್ ಗೌಡ ಕಂದಕೂರ್ ಅವರಿಗೆ ಮಹಾ ಪ್ರಧಾನ ಕಾರ್ಯದರ್ಶಿ ಸ್ಥಾನ, ರಾಜಗೋಪಾಲನಗರದ ನರಸಿಂಹಮೂರ್ತಿಯವರಿಗೆ ಹಿರಿಯ ಉಪಾಧ್ಯಕ್ಷರ ಸ್ಧಾನ, ಮಾಜಿ ಶಾಸಕರಾದ ಸಿಬಿ ಸುರೇಶ್ ಬಾಬುಗೆ ರಾಜ್ಯ ಬೂತ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

      

Recent Articles

spot_img

Related Stories

Share via
Copy link
Powered by Social Snap