ಬೆಂಗಳೂರು :
ಜೂನ್ 1 ರಿಂದ ರಾಜ್ಯದಲ್ಲಿ ಜಿಮ್ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಜಿಮ್ ಮತ್ತು ರೆಸ್ಟೋರೆಂಟ್ ಓಪನ್ ಮಾಡುವುದಿಲ್ಲ ಎಂದು ಎಂದು ಕಂದಾಯ ಸಚಿವ ಆರ್ ಅಶೋಕ ತಿಳಿಸಿದ್ದಾರೆ.
ಈ ವಾರಾಂತ್ಯಕ್ಕೆ ದೇಶದಲ್ಲಿ ನಾಲ್ಕನೇ ಹಂತದ ಲಾಕ್ಡೌನ್ ಮುಕ್ತಾಯವಾಗಲಿದೆ. ಸೋಮವಾರದಿಂದ ರಾಜ್ಯದಲ್ಲಿ ಲಾಕ್ಡೌನ್ ಫ್ರಿ ಆಗಬಹುದು ಎಂಬ ನಿರೀಕ್ಷೆ ಇದೆ. ಜೂನ್ 1ರ ನಂತರ ರಾಜ್ಯದಲ್ಲಿ ಮತ್ತಷ್ಟು ಸಡಿಲಿಕೆ ಸಿಗುವ ಸಾಧ್ಯತೆ ಇದ್ದು, ಜಿಮ್ ಮತ್ತು ರೆಸ್ಟೋರೆಂಟ್ ಮಾಲೀಕರು ಕೆಲಸ ಆರಂಭಿಸುವ ನಿರೀಕ್ಷೆಯಲ್ಲಿದ್ದಾರೆ.
ಜೂನ್ 1 ರ ಬಳಿಕ ಹೋಟೆಲ್ ಗಳು ಓಪನ್ ಆಗಬಹುದು. ಜಿಮ್ ತೆರೆಯುವುದಿಲ್ಲ. ಬಾರ್ ಅಂಡ್ ರೆಸ್ಟೋರೆಂಟ್ ಸದ್ಯಕ್ಕೆ ಓಪನ್ ಮಾಡಲ್ ಎಂದು ಸಚಿವರು ಹೇಳಿದರು.
‘ಕೊರೊನಾ ವೈರಸ್ ಜತೆ ಬದುಕುವುದು ಅನಿವಾರ್ಯವಾಗಿದೆ. ಲಾಕ್ ಡೌನ್ ಫ್ರೀಗೆ ಸರ್ಕಾರ ಮುಕ್ತ ಮನಸ್ಸಿನಿಂದ ಇದೆ. ಸಂಪನ್ಮೂಲ ಕ್ರೋಡೀಕರಣ ಮಾಡಬೇಕಿದೆ. ಖಾಯಿಲೆ ಗುಣ ಪಡಿಸುವುದಕ್ಕೂ ಒತ್ತು ನೀಡ್ತೇವೆ. ಕೇಂದ್ರ ಸರ್ಕಾರದ ಸೂಚನೆಗೆ ಕಾಯುತ್ತಿದ್ದೇವೆ’ ಎಂದು ಆರ್ ಆಶೋಕ್ ವಿಧಾನಸೌದದಲ್ಲಿ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/05/Gym-and-Restuarent.gif)