ಬೆಂಗಳೂರು:
ಬೆಳ್ಳಂಬೆಳಗ್ಗೆ ನಗರದಲ್ಲಿ ಪೊಲೀಸರ ಗುಂಡಿನ ಸದ್ದು ಕೇಳಿದೆ. ನಟೋರಿಯಸ್ ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ.
ಬಗಲಗುಂಟೆ ನಿವಾಸಿ ಸಿದ್ದರಾಜು ಅಲಿಯಾಸ್ ಸಿದ್ದನ ಮೇಲೆ ಬ್ಯಾಡರಹಳ್ಳಿ ಪೊಲೀಸರು ಫೈರಿಂಗ್ ಮಾಡಿದ್ದು, 15ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತ ಪೊಲೀಸರಿಗೆ ತಲೆಮರೆಸಿಕೊಂಡು ಓಡಾಡುತ್ತಿದ್ದ.
ಈತ ಅಡಗಿ ಕುಳಿತಿದ್ದ ಜಾಗದ ಬಗ್ಗೆ ಇಂದು ಮುಂಜಾನೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಕೂಡಲೆ ಸಿದ್ದನನ್ನು ಬಂಧಿಸಲು ಪೊಲೀಸರು ಸ್ಪಾಟ್ ಗೆ ತೆರಳಿದ್ದಾರೆ. ಆಗ ಬ್ಯಾಡರಹಳ್ಳಿ ಪೇದೆ ಹನುಮಂತರಾಜು ಮೇಲೆ ಸಿದ್ದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಇನ್ಸ್ ಪೆಕ್ಟರ್ ರಾಜೀವ್, ಸಿದ್ದನ ಬಲಗಾಲಿಗೆ ಬುಲೆಟ್ ಹಾರಿಸಿದ್ದಾರೆ.
ಸದ್ಯ ಸಿದ್ದ ಮತ್ತು ಪೇದೆ ಹನುಮಂತರಾಜು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗುಣಮುಖವಾದ ನಂತರ ಕಾಮಾಕ್ಷಿಪಾಳ್ಯ, ರಾಜಗೋಪಾಲನಗರ ರೌಡಿಶೀಟರ್ ಪ್ರಕರಣ ಹಾಗೂ ಉಳಿದ ಪ್ರಕರಣಗಳಲ್ಲಿ ಪೊಲೀಸರು ವಿಚಾರಣೆಗೆ ಒಳಪಡಿಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/03/Untitled-4-e1583906070979.gif)