ಬೆಂಗಳೂರು :
ರಾಜ್ಯಾದ್ಯಂತ ಇಂದಿನಿಂದ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್ಎಸ್ಎಲ್ಸಿ ಪರೀಕ್ಷೆ ಇಂದಿನಿಂದ ಪ್ರಾರಂಭವಾಗಲಿದ್ದು, ಏಪ್ರಿಲ್ 4ರವರೆಗೆ ಪರೀಕ್ಷೆಗಳು ನಡೆಯಲಿದೆ.
ಮೊದಲ ದಿನವಾದ ಇಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ತೋರಿಸಿದಲ್ಲಿ ಬಸ್ ಗಳಲ್ಲಿ ಉಚಿತ ಸಂಚಾರ ಸಿಗಲಿದೆ.
ಇನ್ನು ಈ ಬಾರಿ ಒಟ್ಟು 8 ಲಕ್ಷದ 41 ಸಾವಿರದ 666 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಲ್ಲಿ 4 ಲಕ್ಷದ 47 ಸಾವಿರದ 864 ಬಾಲಕರು ಹಾಗೂ 3 ಲಕ್ಷದ 93 ಸಾವಿರದ 802 ಬಾಲಕಿಯರು ಪರೀಕ್ಷೆ ಬರೆಯುತ್ತಿದ್ದಾರೆ.
ರಾಜ್ಯಾದ್ಯಂತ 2857 ಪರೀಕ್ಷೆ ಕೇಂದ್ರಗಳಿದ್ದು, 46 ಸೂಕ್ಷ್ಮ ಕೇಂದ್ರಗಳು ಮತ್ತು 7 ಅತಿ ಸೂಕ್ಷ್ಮ ಕೇಂದ್ರಗಳಿವೆ. ಇದಲ್ಲದೆ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಬಿಗಿ ಭದ್ರತೆ ಮಾಡಲಾಗಿದ್ದು, ಸ್ಕ್ವಾಡ್ಗಳನ್ನ ನೇಮಿಸಲಾಗಿದೆ. ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳಿಗೂ ಸಿಸಿಟಿವಿ ಹಾಕಲಾಗಿದೆ. ಏಪ್ರಿಲ್ ಕೊನೆ ವಾರ ಫಲಿತಾಂಶ ಪ್ರಕಟಗೊಳ್ಳಲಿದೆ.
ಅಕ್ರಮ ತಡೆಗಾಗಿ ವಿಚಕ್ಷಣ ದಳ ಮತ್ತು ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದ 200 ಮೀಟರ್ ಅಂತರದ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪರೀಕ್ಷಾ ಕೇಂದ್ರ ಸುತ್ತಮುತ್ತಲಿನ ಜೆರಾಕ್ಸ್ ಸೆಂಟರ್ ಗಳಿಗೆ ಬೀಗ ಮುದ್ರೆ ಹಾಕಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/03/668324.gif)