ಬೆಂಗಳೂರು:
ರಾಜೀನಾಮೆ ನೀಡಿರುವ ಶಾಸಕರ ಪತ್ರಗಳನ್ನು ಪರಿಶೀಲಿಸಿದ್ದು, 13 ನಾಮಪತ್ರಗಳ ಪೈಕಿ ಐವರ ನಾಮಪತ್ರಗಳು ಮಾತ್ರ ಕ್ರಮ ಬದ್ಧವಾಗಿದೆ. ಇನ್ನು ಉಳಿದವರ ರಾಜೀನಾಮೆಗಳು ನಮ್ಮ ನಿಯಮದಂತೆ ಇಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 13 ರಾಜೀನಾಮೆಗಳಲ್ಲಿ ಆನಂದ್ ಸಿಂಗ್, ನಾರಾಯಣ ಗೌಡ, ಪ್ರತಾಪ್ ಗೌಡ ಪಾಟೀಲ್, ಗೋಪಾಲಯ್ಯ ಹಾಗೂ ರಾಮಲಿಂಗಾ ರೆಡ್ಡಿ ರವರುಗಳು ನಮ್ಮ ನಿಯಮಾವಳಿಯಂತೆ ರಾಜೀನಾಮೆ ಪತ್ರವನ್ನು ಕೊಟ್ಟಿದ್ದಾರೆ. ಉಳಿದ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲ. ಹೀಗಾಗಿ ಅವರಿಗೆ ನಮ್ಮ ಕಚೇರಿಯಿಂದ ತಿಳುವಳಿಕೆ ಕೊಟ್ಟಿದ್ದೇವೆ ಎಂದರು.
ಸರಿಯಾದ ಕ್ರಮದಲ್ಲಿ ರಾಜೀನಾಮೆ ನೀಡಿರುವ 5 ಮಂದಿಗೆ ಇದೇ ತಿಂಗಳ 12 ರಂದು 3 ಗಂಟೆಗೆ ಆನಂದ್ ಸಿಂಗ್, 4 ಗಂಟೆಗೆ ನಾರಾಯಣ ಗೌಡ ಹಾಗೂ ಪ್ರತಾಪ್ ಗೌಡ ಪಾಟೀಲ್ ಹಾಗೂ 15 ರಂದು ಗೋಪಾಲಯ್ಯ ಮತ್ತು ರಾಮಲಿಂಗಾ ರೆಡ್ಡಿಯನ್ನು ವೈಯಕ್ತಿಕ ಕಾರನ ನೀಡಲು ಕರೆದಿದ್ದೇವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
