ಬಿಜೆಪಿಯಲ್ಲಿ 105 ಶಾಸಕರಾದ ಬಳಿಕ ರಾಜ್ಯ ರಾಜಕೀಯ ಚಿತ್ರಣ ಬದಲು

 ಗದಗ:

    ಬಿಜೆಪಿಯಲ್ಲಿ 105 ಎಂಎಲ್​ಎ ಗಳಾದ ಮೇಲೆ ರಾಜ್ಯದ ರಾಜಕೀಯ ಚಿತ್ರಣ ಬದಲಾಗುತ್ತೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

      ಗುರುವಾರ ಇಲ್ಲಿನ ತೋಂಟದಾರ್ಯ ಮಠಕ್ಕೆ ಭೇಟಿ ನೀಡಿದ ಅವರು, ಲಿಂಗೈಕ್ಯರಾದ ತೋಂಟದ ಶ್ರೀಗಳ ಗದ್ದುಗೆ ದರ್ಶನ ಪಡೆದು, ನಮನ ಸಲ್ಲಿಸಿದರು.

      ನಂತರ ಮಾತನಾಡಿದ ಅವರು, ‘ನಾವು ಆಪರೇಷನ್ ಕಮಲ ಮಾಡಲ್ಲ. ಆ ರೀತಿಯ ತೀರ್ಮಾನ ಆಗಿದೆ. ಬಿಜೆಪಿಗೆ ಶಾಸಕರ ಸಂಖ್ಯೆ 105 ಆದ ಮೇಲೆ ರಾಜ್ಯದ ರಾಜಕೀಯ ಚಿತ್ರಣ ಬದಲಾಗುತ್ತದೆ’ ಎಂದಿದ್ದಾರೆ. 

      ‘ಆಂತರಿಕ ಕಲಹದಿಂದ ಕಾಂಗ್ರೆಸ್‌ನಲ್ಲಿ ದಿನಕ್ಕೊಬ್ಬರು ಶಾಸಕರು ಬಂಡಾಯ ಏಳುತ್ತಿದ್ದಾರೆ. ಕುಮಾರಸ್ವಾಮಿ ಹಾಗೂ ರೇವಣ್ಣ ಅವರು ಕಾಂಗ್ರೆಸ್‌ ಶಾಸಕರ ಕೆಲಸ ಮಾಡಿಕೊಡುತ್ತಿಲ್ಲ ಅಂತ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‌ನ ಅವನತಿ ಪ್ರಾರಂಭವಾಗಿದೆ’ ಎಂದರು.

        ಶಿವಮೊಗ್ಗ, ಬಳ್ಳಾರಿ, ಜಮಖಂಡಿಯನ್ನು ನಾವು ನೂರಕ್ಕೆ ನೂರರಷ್ಟು ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link
Powered by Social Snap