ಹುಬ್ಬಳ್ಳಿ :
ನಾಡಿನ ಹಿರಿಯ ಸಾಹಿತಿ, ನಾಡೋಜ ಪ್ರಶಸ್ತಿ ಪುರಸ್ಕೃತ ಕವಿ ಪಾಟೀಲ ಪುಟ್ಟಪ್ಪ ಅವರು ಅನಾರೋಗ್ಯದಿಂದಾಗಿ ಕಿಮ್ಸ್ಗೆ ದಾಖಲಾಗಿದ್ದಾರೆ.
ಜ್ವರ, ಉಸಿರಾಟದ ತೊಂದರೆ ಸಮಸ್ಯೆಯನ್ನು ಅನುಭವಿಸುತ್ತಿರುವ ಪಾಟೀಲ ಪುಟ್ಟಪ್ಪ ಅವರನ್ನು ಪರೀಕ್ಷೆಗೆ ಒಳಪಡಿಸಿರುವ ವೈದ್ಯರು, ಕಳೆದ ನಾಲ್ಕು ದಿನಗಳಿಂದ ಚಿಕಿತ್ಸೆ ನೀಡುತ್ತಿದ್ದಾರೆ.
ಈ ಕುರಿತಂತೆ ಪಾಪು ಅವರ ಕುಟುಂಬದ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಜ್ವರ ಮತ್ತು ಉಸಿರಾಟದ ತೊಂದರೆಯನ್ನು ಅನುಭವಿಸುತ್ತಿದ್ದರು. ಹೀಗಾಗಿ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ನಾಲ್ಕು ದಿನಗಳ ಹಿಂದೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/02/Untitled-2-2.gif)