ಮಣಿಪಾಲ:
ಅನಾರೋಗ್ಯದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಗಳ ಭೇಟಿಗೆ ಇಂದಿನಿಂದ ಅವಕಾಶ ನೀಡದಿರಲು ವೈದ್ಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಶ್ರೀಗಳ ಆರೋಗ್ಯ ಮತ್ತಷ್ಟು ಗಂಭೀರವಾಗಿದೆ. ಕಳೆದ ಎರಡು ದಿನಗಳಿಂದ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಬೆಂಗಳೂರಿನಿಂದ ನುರಿತ ಇಬ್ಬರು ವೈದ್ಯರು ಧಾವಿಸಿದ್ದು, ವೈದ್ಯರ ತಂಡ ಮತ್ತಷ್ಚು ನಿಗಾ ವಹಿಸಿದೆ.
ಕಳೆದ ರಾತ್ರಿ ಶ್ರೀಗಳಿಗೆ ಎಂಆರ್ ಐ ಸ್ಕ್ಯಾನಿಂಗ್ ಮಾಡಿದ್ದು, ಈ ವರದಿಗಾಗಿ ವೈದ್ಯರು ಎದುರುನೋಡುತ್ತಿದ್ದಾರೆ. ಈ ನಡುವೆ ಶ್ರೀಗಳ ಯೋಗಕ್ಷೇಮ ವಿಚಾರಣೆಗೆ ಗಣ್ಯರ ದಂಡೇ ಧಾವಿಸುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲು ಅಡ್ಡಿಯಾಗುತ್ತಿದೆ. ಹೀಗಾಗಿ ಆಸ್ಪತ್ರೆಗೆ ಗಣ್ಯರ ಭೇಟಿಗೆ ನಿರ್ಬಂಧ ವಿಧಿಸುವುದಾಗಿ ಕೆಎಂಸಿ ವೈದ್ಯಕೀಯ ಆಧೀಕ್ಷಕರು ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ