ಉಡುಪಿ:
ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಇಂದು ನೀಡಿರುವ ತೀರ್ಪನ್ನು ಎಲ್ಲರೂ ಸಮಚಿತ್ತದಿಂದ ಸ್ವೀಕರಿಸಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಉಡುಪಿಯಲ್ಲಿಂದು ಮಾತನಾಡಿದ ಅವರು, ಅಯೋಧ್ಯೆಯಲ್ಲಿರುವ ರಾಮಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನ ಸಾಂವಿಧಾನಿಕ ನ್ಯಾಯಪೀಠವು ಇಂದು ಬೆಳಗ್ಗೆ ಅಂತಿಮ ತೀರ್ಪು ಪ್ರಕಟಿಸಿದ್ದು, “ವೈಯಕ್ತಿಕವಾಗಿ ಈ ತೀರ್ಪು ನನಗೆ ಸಮ್ಮತವಾಗಿದೆ. ಎಲ್ಲರೂ ಸಮಚಿತ್ತದಿಂದ ಈ ತೀರ್ಪನ್ನು ಸ್ವೀಕರಿಸಬೇಕು” ಎಂದು ತೀರ್ಪಿಗೆ ಪ್ರತಿಕ್ರಿಯಿಸಿದ್ದಾರೆ.
ಮುಸ್ಲಿಮರಿಗೂ ಐದು ಎಕರೆ ಕೊಡಬೇಕು ಎಂದು ತೀರ್ಪಿನಲ್ಲಿ ಹೇಳಿದ್ದಾರೆ. ಸರಕಾರವೇ ರಾಮಮಂದಿರ ನಿರ್ಮಾಣ ಮಾಡಬೇಕು ಎಂಬ ತೀರ್ಪು ಬಂದಿದೆ. ಹಿಂದೂಗಳಿಗೆ ಜನ್ಮಭೂಮಿಯ ಹಕ್ಕು ಮುಖ್ಯ. ಮುಸ್ಲಿಮರಿಗೆ ಮಸೀದಿಗೆ ಜಾಗ ಮುಖ್ಯ. ಈ ನಿಟ್ಟಿನಲ್ಲಿ ನ್ಯಾಯಾಲಯದ ಈ ತೀರ್ಪು ಹಿಂದೂ-ಮುಸ್ಲಿಮರಲ್ಲಿ ಬಾಂಧವ್ಯ ಬೆಳೆಯಲು ಉತ್ತಮ ಅವಕಾಶ ಎಂದು ಅಭಿಪ್ರಾಯಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ