ಸಿಎಂಗೆ ಖಾಸಗಿ ಬಸ್‌ ಟಿಕೇಟ್‌‌ ಬುಕ್‌ ಮಾಡಿದ ಪ್ರಯಾಣಿಕ!!

ಕಾರವಾರ :

      ಉತ್ತರ ಕನ್ನಡ ಜಿಲ್ಲೆಯ ಪ್ರಯಾಣಿಕರೊಬ್ಬರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬಸ್ ಟಿಕೆಟ್ ಬುಕ್ ಮಾಡಿ ದೀಪಾವಳಿ ಹಬ್ಬಕ್ಕೆ ಆಹ್ವಾನಿಸಿದ್ದಾರೆ.

      ದೀಪಾವಳಿ ಹಬ್ಬಕ್ಕೆ ಖಾಸಗಿ ಬಸ್ ಗಳ ದುಬಾರಿ ದರದಿಂದ ಕಂಗೆಟ್ಟಿರುವ ಹೊನ್ನಾವರ ತಾಲೂಕಿನ ಪ್ರಯಾಣಿಕ ರಾಜೇಶ್ ಈ ರೀತಿ ಮಾಡಿದ್ದು, ಖಾಸಗಿ ಬಸ್ ಗಳ ದುಬಾರಿ ದರ ವಿಧಿಸುವ ಬಗ್ಗೆ ಸಿಎಂ ಗಮನಕ್ಕೆ ತರಲು ತಾವು ಬುಕ್ ಮಾಡಿದ ಟಿಕೆಟ್ ನ ಫೊಟೋ ಟ್ವೀಟ್ ಮಾಡಿ ಸಿಎಂ ಗೆ ಟ್ಯಾಗ್ ಮಾಡಿದ್ದಾರೆ. ಅಲ್ಲದೇ ಟಿಕೆಟ್ ನ್ನು ಸಿಎಂ ನ ಬೆಂಗಳೂರು ಕಚೇರಿಯ ವಿಳಾಸಕ್ಕೆ ಕಳುಹಿಸಿಕೊಟ್ಟಿದ್ದಾರೆ.

       ಖಾಸಗಿ ಬಸ್ ದರವು ಸಾಮಾನ್ಯ ದಿನಗಳಲ್ಲಿ 700, 800 ರೂ ಗಳಿದ್ದರೆ ಹಬ್ಬದ ದಿನಗಳಲ್ಲಿ ಮಾತ್ರ 1500, 2500ಕ್ಕೂ ಅಧಿಕವಾಗಿರುತ್ತದೆ. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ. 

      ಬಸ್ ದರದಿಂದ ಬೇಸತ್ತ ಪ್ರಯಾಣಿಕ ರಾಜೇಶ್ ಅವರು, ಎಸ್‍ ಆರ್ ಎಸ್ ಟ್ರಾವೆಲ್ಸ್ ನಲ್ಲಿ 1,570 ರೂ. ಟಿಕೆಟ್ ಬುಕ್ ಮಾಡಿದ್ದಾರೆ. ಬಳಿಕ ಟಿಕೆಟ್ ಫೋಟೋ ಟ್ವೀಟ್ ಮಾಡಿ, ಮುಖ್ಯಮಂತ್ರಿಯವರಿಗೆ ಟ್ಯಾಗ್ ಮಾಡಿ, ದೀಪಾವಳಿಗೆ ಹೊನ್ನಾವರ ತಾಲೂಕಿನ ಗುಂಡಬಾಳಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.ಈ ಮೂಲಕ ಸಿಎಂ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap