ಧಾರವಾಡ:
ರಾತ್ರಿ ಬೆಳಗಾವಿಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಪೆಟ್ರೋಲ್ ಟ್ಯಾಂಕರ್ನಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಧಾರವಾಡ ನಗರದ ಜಿಲ್ಲಾ ನ್ಯಾಯಾಲಯದ ಮುಂದೆ ನಡೆದಿದೆ ಎಂದು ವರದಿಯಾಗಿದೆ .
ಟ್ಯಾಂಕರಿನ ಕ್ಯಾಬಿನ್ನಲ್ಲಿ ಏಕಾಏಕಿ ಬೆಂಕಿ ಹೊತ್ತಿ ಉರಿದಿದ್ದು. ಕೂಡಲೇ ಎಚ್ಚೆತ್ತ ಚಾಲಕ ಸ್ಥಳದಲ್ಲೇ ಟ್ಯಾಂಕರ್ ನಿಲ್ಲಿಸಿದ್ದಾನೆ ಎಂದು ತಿಳಿದು ಬಂದಿದೆ ಈ ಟ್ಯಾಂಕರ್ ಪೆಟ್ರೋಲ್ ಖಾಲಿ ಮಾಡಿ ವಾಪಸ್ಸಾಗುತ್ತಿತ್ತು ಎಂದು ತಿಳಿದು ಬಂದಿದೆ.
ಬೆಂಕಿ ಕಾಣಿಸಿಕೊಂಡ ನಂತರ ಲಾರಿ ಚಾಲಕ ಸ್ಥಳದಲ್ಲೇ ಟ್ಯಾಂಕರ್ ನಿಲ್ಲಿಸಿ ಸ್ಥಳೀಯರ ಸಹಾಯ ಪಡೆದು ಬೆಂಕಿ ನಂದಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಈ ಪ್ರಯತ್ನ ವಿಫಲವಾದ ಕಾರಣ ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ