ಹುಬ್ಬಳ್ಳಿಯಲ್ಲಿ ಮೋದಿ ಹತ್ಯೆಗೆ ಸಂಚು..! ಇಲ್ಲಿದೆ ಸಾಕ್ಷಿ!!!

ಹುಬ್ಬಳ್ಳಿ:

      ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿ ಸಮಾವೇಶಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಅವರನ್ನು ಹತ್ಯೆ ಮಾಡುವುದಾಗಿ ಪತ್ರ ಬರೆಯಲಾಗಿರುವ ವಿಷಯ ಹರಿದಾಡುತ್ತಿದೆ. 

      ಮೋದಿಯವರನ್ನು ಹುಬ್ಬಳ್ಳಿ ಸಮಾವೇಶದಲ್ಲಿ ಹತ್ಯೆ ಮಾಡುವುದಾಗಿ ಪತ್ರ ಬರೆಯಲಾಗಿದ್ದು, ಈ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಪ್ರಧಾನಿ ಮೋದಿ ಅವರಿಗೆ ಎಲ್ಲಾ ಕಡೆ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ.ಮೋದಿ ಆಗಮನದಿಂದ ನಿರ್ಗಮನದವರೆಗೂ ವ್ಯಾಪಕ ಭದ್ರತೆ ಒದಗಿಸಲಾಗಿದೆ. 

      ಮೋದಿ ಹತ್ಯೆ ಮಾಡುವುದಾಗಿ ಬರೆಯಲಾದ ಬೆದರಿಕೆ ಪತ್ರ ಫೆಬ್ರವರಿ 8 ರಂದು ಧಾರವಾಡ ಎಸ್ಪಿ ಕಚೇರಿ ತಲುಪಿದ್ದು, ತಡವಾಗಿ ಬೆಳಕಿಗೆ ಬಂದಿದೆ.  ಬೆದರಿಕೆ ಪತ್ರ ಬಂದಿರುವ ಕುರಿತಾಗಿ ಪೊಲೀಸ್ ಇಲಾಖೆಯಿಂದ ಈಗಾಗಲೇ ತನಿಖೆ ಕೈಗೊಳ್ಳಲಾಗಿದೆ. ಪತ್ರ ಬರಲಿ ಬಿಡಲಿ ನಾವು ಭದ್ರತೆಯನ್ನು ಒದಗಿಸುತ್ತೇವೆ ಎಂದು ಎಡಿಜಿಪಿ ಕಮಲ್ ಪಂತ್ ಹೇಳಿದ್ದಾರೆ. 

 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap