ಕೆಪಿಎಸ್​ಸಿ ಪರೀಕ್ಷಾ ವಿಧಾನದಲ್ಲಿ ಬದಲಾವಣೆಗೆ ಚಿಂತನೆ!!

ಬೆಂಗಳೂರು:

     ಕೆಪಿಎಸ್​ಸಿ ಪರೀಕ್ಷಾ ವಿಧಾನದಲ್ಲಿ ಬದಲಾವಣೆ ತರಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

     ಪ್ರಶ್ನೋತ್ತರ ಕಲಾಪದಲ್ಲಿ ಪ್ರದೀಪ್ ಶೆಟ್ಟರ್ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಇತ್ತೀಚೆಗೆ ಕೆಪಿಎಸ್​ಸಿ ಬಹಳಷ್ಟು ಚರ್ಚೆಯಲ್ಲಿದೆ. ಯಾವುದೇ ಪರೀಕ್ಷೆ ನಡೆದರೂ ಅವ್ಯವಹಾರದ ಆರೋಪ ಬರುತ್ತಿದೆ. ನಿಜವಾಗಿಯೂ ಅರ್ಹತೆ ಇರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಈ ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ಕೆಪಿಎಸ್​ಸಿ ಸಿಬ್ಬಂದಿಯಿಂದಲೇ ಆಗಿದೆ. ಸುರಕ್ಷತೆಯಿಂದ ಇರಿಸಿಕೊಳ್ಳಬೇಕಾದವರೇ ಲೀಕ್ ಮಾಡಿದ್ದಾರೆ. ಈ ಕುರಿತು ಸದ್ಯಕ್ಕೆ ತನಿಖೆ ನಡೆಯುತ್ತಿದೆ. ನಂತರ ಸತ್ಯ ಹೊರಬರಲಿದೆ ಎಂದರು.

    ಪರೀಕ್ಷಾ ವಿಧಾನದಲ್ಲಿ ಬದಲಾವಣೆ ತರುವ ಚಿಂತನೆ ಅಗತ್ಯವಿದೆ. ಆನ್​ಲೈನ್ ನಲ್ಲಿ ಸಣ್ಣ ಪರೀಕ್ಷೆ ಮಾಡಿ ನಂತರ ಮುಖ್ಯ ಪರೀಕ್ಷೆ ಮಾಡಬೇಕು ಎನ್ನುವುದು ಒಂದು, ಮತ್ತೊಂದು ಅಂಕಗಳ ಆಧಾರದಲ್ಲಿ ನೇಮಕ ಮಾಡುವುದು. ಈ ಎರಡೂ ವಿಚಾರದಲ್ಲಿ ಚಿಂತನೆ ನಡೆದಿದೆ. ಓರಲ್ ಮಾರ್ಕ್ಸ್ ಕಡಿಮೆ ಇರಬೇಕು ಎನ್ನುವ ಬೇಡಿಕೆ ಸಹ ಇದೆ. ಪರೀಕ್ಷಾ ವಿಧಾನದಲ್ಲಿ ಬದಲಾವಣೆ ತರಲು ಚಿಂತನೆ ಮಾಡಲಾಗುತ್ತಿದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap