ಮಂಡ್ಯ :
ವೈಯಕ್ತಿಕ ಅಸಮಾಧಾನ ಏನೇ ಇರಲಿ ಮಂಡ್ಯ ಜಿಲ್ಲೆಯನ್ನು ಕಡೆಗಣಿಸಬೇಡಿ ಎಂದು ಮುಖ್ಯಮಂತ್ರಿಯವರಿಗೆ ಮಾಜಿ ಸಚಿವ ಚಲುವರಾಯಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.
ಕಾವೇರಿ ನೀರು ಬಿಡುವ ಕುರಿತು ಮಾತನಾಡಿದ ಚಲುವರಾಯಸ್ವಾಮಿ, ರೈತರಿಗೆ 10 ರಿಂದ 15 ದಿನ ನೀರು ಬಿಡುವ ಅವಕಾಶ ಇತ್ತು. ಇಂದು ದುರಾದೃಷ್ಟ ಜಿಲ್ಲೆಯ ಒಬ್ಬ ಜನಪ್ರತಿನಿಧಿಯೂ ಕಾವೇರಿ ಸಭೆ ಕರೆಯಲಿಲ್ಲ. ಸಿಎಂ ಬಳಿಯೂ ಜಿಲ್ಲೆಯ ಸಮಸ್ಯೆ ಬಗ್ಗೆ ಹೇಳಲಿಲ್ಲ. ಚುನಾವಣೆಯಲ್ಲಿ ಹಿನ್ನಡೆಯಾಗಿದೆ ಎನ್ನುವ ಕಾರಣಕ್ಕಾಗಿ, ಸಿಟ್ಟು ಮಾಡಿಕೊಂಡು ಜಿಲ್ಲೆಯ ಶಾಸಕರು ಸಿಎಂ ಬಳಿ ಕಾವೇರಿ ವಿಚಾರದ ಬಗ್ಗೆ ಮಾತನಾಡದೇ ಇದ್ದಿರಬಹುದು ಎಂದು ಚೆಲುವರಾಯಸ್ವಾಮಿ ಹೇಳಿದ್ದಾರೆ.
ನೀರು ಬಿಡಲು ಕಾವೇರಿ ಪ್ರಾಧಿಕಾರದ ಅನುಮತಿ ಬೇಕು ಎಂದು ಹೇಳುತ್ತಾರೆ. ಚುನಾವಣೆಗೆ ಮುನ್ನ ಪ್ರಾಧಿಕಾರದ ಅನುಮತಿ ಪಡೆಯದೇ ಮೂರು ಬಾರಿ ನೀರು ಬಿಟ್ಟಿರುವುದು ಇಲ್ಲಿನ ರೈತರಿಗೆ ತಿಳಿದಿದೆ. ಇರುವ ನೀರನ್ನು ಬಳಸಬೇಡಿ ಎಂದು ಪ್ರಾಧಿಕಾರ ಹೇಳಿಲ್ಲ. ಬೆಳೆಗೂ ನೀರು ಕೊಟ್ಟು ಕುಡಿಯುವುದಕ್ಕೂ ನೀರು ಉಳಿಸಿಕೊಳ್ಳಬಹುದಿತ್ತು. ಆದರೆ ಖಡಾಖಂಡಿತವಾಗಿ ನೀರು ಬಿಡೋದು ಬೇಡ ಎಂದು ತೀರ್ಮಾನಿಸಿದ್ದಾರೆ ಎಂದು ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/06/kumaraswamy-cheluvarayswmy.gif)