ಅನೈತಿಕ ಸಂಬಂಧವೇ ಕಾಂಗ್ರೆಸ್ ನಾಯಕಿ ರೇಷ್ಮಾ ಹತ್ಯೆಗೆ ಕಾರಣವಾಯಿತಾ!!?

ವಿಜಯಪುರ: 

      ಕಾಂಗ್ರೆಸ್ ಮುಖಂಡೆ, ಜೆಡಿಎಸ್‍ನ ವಿಜಯಪುರ ಮಾಜಿ ಜಿಲ್ಲಾಧ್ಯಕ್ಷೆ ರೇಷ್ಮಾ ಪಡೇಕನೂರ ಹತ್ಯಾ ಪ್ರಕರಣದ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.

ವಿಜಯಪುರ : ಕಾಂಗ್ರಸ್ ನಾಯಕಿ ಹತ್ಯೆ..!!

      ತೌಫಿಕ್ ಶೇಕ್ ಅಲಿಯಾಸ್ ಪೈಲ್ವಾನ್ ಬಂಧಿತ ಆರೋಪಿ. ಈತ ಮಹಾರಾಷ್ಟ್ರದ ಎಐಎಂಐಎಂ ಮುಖಂಡ ಹಾಗೂ ಸೊಲ್ಲಾಪುರ ಮಹಾನಗರ ಪಾಲಿಕೆ ಕಾರ್ಪೊರೇಟರ್.  Image result for congress reshma murder

      ತೌಫಿಕ್​ ಶೇಖ್​ ಜತೆ ರೇಷ್ಮಾ ಅನೈತಿಕ ಸಂಬಂಧ ಹೊಂದಿದ್ದರು. ಈ ವಿಚಾರವನ್ನು ಮುಂದಿಟ್ಟುಕೊಂಡು ರೇಷ್ಮಾ ಹಣ ಮತ್ತು ಆಸ್ತಿಗಾಗಿ ತೌಫಿಕ್​ನನ್ನು ಪದೇಪದೆ ಬ್ಲಾಕ್​ಮೇಲ್​ ಮಾಡುತ್ತಿದ್ದರು. ತೌಫಿಕ್​ನ ಎಂಟು ಎಕರೆ ಆಸ್ತಿಯನ್ನು ತನ್ನ ಹೆಸರಿಗೆ ಬರೆಯುವಂತೆ ಅವರು ಪೀಡಿಸುತ್ತಿದ್ದರು. ರೇಷ್ಮಾಳ ಬ್ಲಾಕ್​ಮೇಲ್​ನಿಂದ ಬೇಸತ್ತ ತೌಫಿಕ್​ ಶೇಖ್​ ಆಕೆಯನ್ನು ಹತ್ಯೆ ಮಾಡಿದ್ದಾನೆ ಎಂದು ವಿಜಯಪುರ ಎಸ್​ಪಿ ಪ್ರಕಾಶ್​ ನಿಕಂ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

      ಬಸವನಬಾಗೇವಾಡಿ ಸಿಪಿಐ ಮಹದೇವ ಶಿರಹಟ್ಟಿ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ತೌಫಿಕ್ ಆತನ ಕಾರು ಚಾಲಕ ಇಜಾಜ್ ಬಿರಾದಾರನನ್ನು ಬಂಧಿಸಿದ್ದಾರೆ.  

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap