ಬೆಂಗಳೂರು:
ವಿಪ್ ವಿಚಾರ ಇತ್ಯರ್ಥವಾಗುವ ತನಕ ವಿಶ್ವಾಸ ಮತಯಾಚನೆ ಮುಂದೂಡಬೇಕು ಎಂದು ಸಿಎಲ್ಪಿ ನಾಯಕ ಸಿದ್ದರಾಮಯ್ಯ ಅವರು ಸ್ಪೀಕರ್ ರಮೇಶ್ ಕುಮಾರ್ಗೆ ಮನವಿ ಮಾಡಿದ್ದಾರೆ.
ಕ್ರಿಯಾ ಲೋಪದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿಧಾನಸಭೆ ಕಲಾಪದಲ್ಲಿ ಚರ್ಚಿಸುತ್ತಿದ್ದರು, ಈ ವೇಳೆ ವಿಪ್ ಅನ್ವಯವಾಗುತ್ತದೋ ಇಲ್ಲವೋ ಎಂಬುದು ಇತ್ಯರ್ಥವಾಗುವವರೆಗೂ ವಿಶ್ವಾಸ ಮತದ ಚರ್ಚೆ ಹಾಗೂ ಮತಕ್ಕೆ ಹಾಕುವುದು ಬೇಡ ಎಂದು ಮಾಜಿ ಸಿಎಂ ಸಿದ್ದಾರಾಮಯ್ಯ ಪ್ರತಿಪಾದಿಸಿದರು
ವಿಧಾನಸಭೆ ಕಲಾಪದಲ್ಲಿ ವಿಶ್ವಾಸಮತ ಯಾಚನೆ ಸಂಬಂಧ ಬೆಳಗ್ಗೆಯಿಂದಲೂ ಚರ್ಚೆ ನಡೆಯುತ್ತಿದ್ದು, ವಿಧಾನಸಭೆ ಕಲಾಪವನ್ನು ಸ್ಪೀಕರ್ ರಮೇಶ್ ಕುಮಾರ್ ಮಧ್ಯಾಹ್ನ 3ಗಂಟೆಗೆ ಮುಂದೂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/03/siddaraima.gif)