ಮೀನಿನ ಮೇಲಿದ್ದ ನಿಷೇಧ ಹಿಂಪಡೆದ ಗೋವಾ..!!

ಕಾರವಾರ: 

        ಕರ್ನಾಟಕದಿಂದ ರಪ್ತಾಗುವ ಮೀನಿನ ಮೇಲೆ ನಿಷೇಧ ಹೇರಿದ್ದ ಗೋವಾ ಸರ್ಕಾರ ಕರ್ನಾಟಕದ ಮೀನುಗಾರರಿಗೆ ಹೊಸ ವರ್ಷದ ಸಂಭ್ರಮಕ್ಕೆ ಸಿಹಿ ಸುದ್ದಿ ನೀಡಿದೆ.

         ಕರ್ನಾಟಕದಿಂದ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಗೋವಾ ಸರ್ಕಾರ ಕೊನೆಗೂ ಮಣಿದಿದೆ ಕರ್ನಾಟಕದಿಂದ ಆಮದಾಗುವಂತಹ  ಮೀನುಗಳ ಮೇಲೆ ವಿಧಿಸಿದ್ದ ನಿಷೇಧವನ್ನು ತೆರವುಗೊಳಿಸಿದೆ , ಆದರೆ ಜಿಲ್ಲೆಗಳಾದ ಉಡುಪಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗಳ ಮೀನುಗಳ ಮೇಲಿನ ನಿರ್ಬಂಧವನ್ನು ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ .

         ಇದಕ್ಕೆ ಕಾರಣವನ್ನು ಕೊಟ್ಟಿರುವ ಗೋವಾ ದಕ್ಷಿಣ ಕನ್ನಡದ ವಿವಿದೆಡೆಯಿಂದ ಆಮದಾಗುವ ಮೀನುಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ವಸ್ತು ಪತ್ತೆಯಾದ ಹಿನ್ನೆಲೆಯಲ್ಲಿ ಅವುಗಳ ಆಮದನ್ನು ನಿರ್ಬಂಧಿಸಿ ಗೋವಾ ಆರೋಗ್ಯ ಇಲಾಖೆ ಘೋಷಿಸಿತ್ತು.ಆದರೆ, ಇದರ ವಿರುದ್ಧ ಕಾರವಾರದಲ್ಲಿ ಮೀನುಗಾರರು ತೀವ್ರ ಪ್ರತಿಭಟನೆ ನಡೆದಿತ್ತಲ್ಲದೇ, ಮೀನುಗಳ ಸಂರಕ್ಷಣೆಗೆ ರಾಸಾಯನಿಕ ಬಳಸುವುದಿಲ್ಲ ಎಂದು  ಸ್ಪಷ್ಟಪಡಿಸಿದ್ದರು. ವಿವಿಧ ರಾಜಕೀಯ ನಾಯಕರು ಗೋವಾ ಸಚಿವರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸುವಂತೆ ಒತ್ತಡ ಹಾಕಿದ್ದರು ಎಂದು ತಿಳಿದು ಬಂದಿದೆ . 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link