ಮಂಗಳೂರು:

ಆಸ್ತಿಯ ವಿಚಾರಕ್ಕೆ ಸಂಬಂಧಿಸಿ ಗಲಾಟೆ ನಡೆದು ತಮ್ಮನೊಬ್ಬ ಅಣ್ಣನನ್ನೇ ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಮಂಗಳೂರು ತಾಲೂಕಿನ ಬೆಂಗ್ರೆಯ ಕಸಬಾ ಬೆಂಗ್ರೆ ಕಿಲಾರಿ ಮಸೀದಿ ಸಮೀಪ ಈ ಘಟನೆ ನಡೆದಿದೆ.
ಬೆಂಗ್ರೆ ನಿವಾಸಿ ಮುಸ್ತಾಪ ಕೊಲೆಯಾದ ವ್ಯಕ್ತಿ. ಮೃತ ಮುಸ್ತಫಾನ ಸಹೋದರ ರೈಜು ಯಾನೆ ಅಬ್ದುಲ್ ರಹಮಾನ್ ಕೊಲೆ ಆರೋಪಿ.
ಆಸ್ತಿಯ ಮತ್ತು ಮನೆ ವಿಚಾರಕ್ಕೆ ಇವರ ಮನೆಯಲ್ಲಿ ಯಾವಾಗಲೂ ಗಲಾಟೆ ನಡೆಯುತ್ತಿತ್ತು. ಅಲ್ಲದೆ ತಾಯಿ ಹಾಗೂ ತಂಗಿಗೆ ಮನೆಯ ವಿಚಾರದಲ್ಲಿ ರೈಜು ಹಿಂಸೆ ನೀಡುತ್ತಿದ್ದ ಎಂದು ಹೇಳಲಾಗಿದೆ. ನಿನ್ನೆ ರಾತ್ರಿ ಸುಮಾರು ಹತ್ತು ಗಂಟೆಯ ವೇಳೆಗೆ ಮತ್ತೆ ಮನೆಯ ವಿಚಾರಕ್ಕೆ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ತಾಯಿ ಹಾಗೂ ಇವರ ಬಾವ ಗಲಾಟೆ ಬಿಡಿಸಲು ಪ್ರಯತ್ನಿಸಿದ್ದಾರೆ. ಆದರೆ ಆರೋಪಿ ರೈಜು ತನ್ನ ಜೊತೆ ಇದ್ದ ಚೂರಿಯಿಂದ ಮುಸ್ತಾಪನಿಗೆ ಮಾರಣಾಂತಿಕವಾಗಿ ಇರಿದು ಪರಾರಿಯಾಗಿದ್ದಾನೆ.
ಗಂಭೀರವಾಗಿ ಗಾಯಗೊಂಡ ಮುಸ್ತಾಫನನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ ಯಾದರೂ ಮುಂಜಾನೆ ಸುಮಾರು 2.30 ರ ವೇಳೆ ಆತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಮೂಲಕ ಅಣ್ಣ ತಮ್ಮಂದಿರ ಅಸ್ತಿಯ ವಿಚಾರದ ಗಲಾಟೆ ಕೊನೆಗೂ ಕೊಲೆಯಲ್ಲಿ ಅಂತ್ಯವಾಗಿದೆ.
ಆರೋಪಿ ಮುಸ್ತಫಾನನ್ನು ಬಂಧಿಸಿದ್ದು, ಸ್ಥಳಕ್ಕೆ ಪಣಂಬೂರು ಠಾಣಾ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








