ಬೆಳಗಾವಿ :
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕೃಷ್ಣಾ, ದೂಧಗಂಗಾ, ವೇದಗಂಗಾ, ಪಂಚಗಂಗಾ, ಘಟಪ್ರಭಾ, ಮಲಪ್ರಭಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಮರುಕಳಿಸುವ ಭೀತಿ ಎದುರಾಗಿದೆ.
ಮಹಾರಾಷ್ಟ್ರದ ಕೊಯ್ನಾ ಡ್ಯಾಮ್ ನಿಂದ 2,20,000 ಕ್ಯೂಸೆಕ್ ನೀರು ಬಿಡುಗಡೆ ಮಾಡಿದೆ. ಇನ್ನೂ 20 ಸಾವಿರ ಕ್ಯೂಸೆಕ್ ನೀರು ಬಿಡುವ ಸಾಧ್ಯತೆ ಇದೆ. ಜಲಾಶಯಕ್ಕೆ ಬರುವಷ್ಟು ನೀರನ್ನು ನದಿಗೆ ಹರಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ಕೃಷ್ಣಾ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.
ಈಗಾಗಲೇ ಮುತ್ತೂರು ಗ್ರಾಮದ ಮನೆಗಳು ಜಲಾವೃತಗೊಂಡಿವೆ. ರಾಯಬಾಗ ತಾಲೂಕಿನ ಮೂರು, ಚಿಕ್ಕೋಡಿ ತಾಲೂಕಿನ ಒಂದು ಗ್ರಾಮಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ. 15 ಸೇತುವೆಗಳು ಮುಳುಗಡೆಯಾಗಿವೆ. ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಬೆಳಗಾವಿ ಜಿಲ್ಲಾಡಳಿತದಿಂದ ಗ್ರಾಮಸ್ಥರಿಗೆ ಸೂಚನೆಯನ್ನೂ ನೀಡಲಾಗಿದೆ.
ಪ್ರವಾಹ ಉಂಟಾದರೆ ಅಗತ್ಯವಿದ್ದರೆ ದೋಣಿ ಮತ್ತು ಇತರ ಸುರಕ್ಷತಾ ವ್ಯವಸ್ಥೆ ಮಾಡುವಂತೆ ಪಂಚಾಯತ್ ರಾಜ್ ಮತ್ತು ಲೋಕೋಪಯೋಗಿ ಇಲಾಖೆಗಳ ಎಂಜಿನಿಯರ್ ಗಳು, ಜಿಲ್ಲಾ ಗೃಹ ರಕ್ಷಕ ದಳ, ಪೊಲೀಸ್ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗೆ ಸೂಚಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/08/krishna-dam-20160629.gif)