ರಾಯಚೂರು:
ನಿನ್ನೆ ರಾತ್ರಿ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಅಂತ್ಯಸಂಸ್ಕಾರ ಇಂದು ನೆರವೇರಿತು.
ರಾಯಚೂರು ತಾಲೂಕಿನ ಪೋತಗಲ್ ಬಳಿಯ ಸ್ಮಶಾನದಲ್ಲಿ ಅಂತಿಮ ವಿಧಿವಿಧಾನ ನಡೆಸಲಾಯ್ತು. ಗಸ್ತಿ ಅವರು ಕೊರೊನಾ ಸೋಂಕಿಗೀಡಾಗಿದ್ದರಿಂದ ರಾಯಚೂರು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ನೇತೃತ್ವದಲ್ಲಿ ಕೋವಿಡ್ ನಿಯಮದಂತೆ ಅಂತ್ಯಸಂಸ್ಕಾರ ಮಾಡಲಾಯ್ತು.
ಅಶೋಕ್ ಗಸ್ತಿಯವರ ಹಿರಿಯ ಮಗಳಿಂದ ಅಂತಿಮ ವಿಧಿವಿಧಾನಗಳ ನಡೆಯಿತು. ಕುಟುಂಬಸ್ಥರು ಪಿಪಿಇ ಕಿಟ್ ಧರಿಸಿ ಕಾರ್ಯದಲ್ಲಿ ಭಾಗಿಯಾಗಿದ್ರು. ಇದಕ್ಕೂ ಮೊದಲು ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯ್ತು.
ಇತ್ತೀಚೆಗಷ್ಟೇ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಅಶೋಕ್ ಗಸ್ತಿ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಮೃತಪಟ್ಟಿದ್ದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/09/Ashok-gasthi.jpg)