ಬೆಂಗಳೂರು :
ಖ್ಯಾತ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ರಂ.ಶಾ ಲೋಕಾಪುರ ನಿನ್ನೆ ರಾತ್ರಿ ಪುಣೆಯಲ್ಲಿ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ರಾತ್ರಿ ಪುಣೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ತಾಯಿ ಸಾಹೇಬ, ಸಾವಿತ್ರಿ ಶ್ರೇಷ್ಠ ಕಾದಂಬರಿಗಳು, ಸುಂಕಾನಟ್ಟಿಯ ಚಂದ್ರಿ, ನೆಳಲಿಯ ಪ್ರಸಂಗ ಮೊದಲಾದ ನಾಟಕಗಳನ್ನು ಬರೆದಿದ್ದಾರೆ. ಜೊತೆಗೆ ಅನಂತಮೂರ್ತಿಯವರ ಸಂಸ್ಕಾರ ಮತ್ತು ಶಿವರಾಮ ಕಾರಂತರ ಮರಳಿ ಮಣ್ಣಿಗೆ ಕಾದಂಬರಿಗಳನ್ನು ಮರಾಠಿಗೆ ಅನುವಾದ ಮಾಡಿದ್ದರು. ಅಲ್ಲದೇ ಮರಾಠಿ ಸಾಹಿತ್ಯದ ಮೇಲೆ ಕನ್ನಡದ ಪ್ರಭಾವ ಕುರಿತು ಆಳವಾದ ಸಂಶೋಧನೆ ಮಾಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/11/ramsha-Lokapura.gif)