ಬೆಂಗಳೂರು :
ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ರಾಸಲೀಲೆ ಸಿಡಿ ಪ್ರಕರಣ ಕುರಿತಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದು, ಸಿಡಿ 100 ಪರ್ಸೆಂಟ್ ನಕಲಿ ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ನನ್ನ ರಾಜಕೀಯ ಏಳಿಗೆ ಸಹಿಸದ ಜನರು ಸಿಡಿ ಬಿಡುಗಡೆ ಮಾಡಿದ್ದಾರೆ. ನನಗೆ ಕುಟುಂಬದ ಗೌರವ ಮುಖ್ಯ. ನನ್ನ ವಿರುದ್ಧ ಷಡ್ಯಂತ್ರ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ನಾನು ಸುಮ್ಮನೆ ಬಿಡುವುದಿಲ್ಲ. ಷಡ್ಯಂತ್ರ ಮಾಡಿದವರನ್ನು ಜೈಲಿಗೆ ಹಾಕದೆ ಬಿಡುವುದಿಲ್ಲ ಎಂದು ಗುಡುಗಿದ್ದಾರೆ.
ನಾಲ್ಕು ದಿನಗಳ ಮೊದಲೇ ಸಿಡಿ ಬಿಡುಗಡೆ ಮಾಡುವ ಬಗ್ಗೆ ಮಾಹಿತಿ ಬಂದಿತ್ತು . ಹೈಕಮಾಂಡ್ ನನಗೆ 24 ಗಂಟೆಯ ಮೊದಲೇ ಮಾಹಿತಿ ನೀಡಿತ್ತು. ಸಿಡಿ ಬಿಡುಗಡೆಯ ಬಗ್ಗೆ ನನಗೆ ಮಾಹಿತಿ ನೀಡಿದ್ದರು. ಇದು ನೂರಕ್ಕೆ ನೂರರಷ್ಟು ನಕಲಿ ಸಿಡಿ ಆಗಿದೆ. ನಾನು ಧೈರ್ಯದಿಂದ ಇದ್ದ ಕಾರಣ ಕಾನೂನು ಹೋರಾಟಕ್ಕೆ ಹೋಗಲಿಲ್ಲ ಎಂದು ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ