ಬೆಳಗಾವಿ:
ಕಳೆದ 10 ಸಂಪುಟ ಸಭೆಗಳಿಗೆ ಗೈರಾದ ರಮೇಶ್ ಜಾರಕಿಹೊಳಿ ಇದೀಗ ಅಧಿವೇಶನಕ್ಕೂ ಕೂಡ ಗೈರಾಗುತ್ತಿದ್ದಾರೆ ಎನ್ನಲಾಗುತ್ತಿದೆ.
ಬೆಳಗಾವಿ ಸುವರ್ಣ ಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಅಧಿವೇಶನದ ಹಿನ್ನೆಲೆಯಲ್ಲಿ ಬೆಳಗಾವಿಗೆ ತೆರಳಿದ ಸಿಎಂ ಮತ್ತು ಸಚಿವರನ್ನು ಸ್ವಾಗತಿಸಲೂ ವಿಮಾನ ನಿಲ್ದಾಣಕ್ಕೆ ಆಗಮಿಸದ ಸಚಿವ ಜಾರಕಿಹೋಳಿ ಅಧಿವೇಶನಕ್ಕೆ ಆಗಮಿಸುವುದು ಅನುಮಾನವಾಗಿದೆ.
ಮುಖ್ಯಮಂತ್ರಿಗಳನ್ನು ಶಾಸಕರಾದ ಕಾಂಗ್ರೆಸ್ನ ಲಕ್ಷ್ಮಿ ಹೆಬ್ಬಾಳಕರ, ಡಾ.ಅಂಜಲಿ ನಿಂಬಾಳ್ಕರ್, ಜೆಡಿಎಸ್ ಮುಖಂಡರಾದ ಎನ್.ಎಚ್. ಕೋನರೆಡ್ಡಿ, ಶಂಕರ ಮಾಡಲಗಿ ಹಾಗೂ ಅಧಿಕಾರಿಗಳು ಬರಮಾಡಿಕೊಂಡರು.
ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಜಾರಕಿಹೊಳಿ ಬೆಳಗಾವಿಯಲ್ಲಿ ಸೋಮವಾರದಿಂದ ನಡೆಯುತ್ತಿರುವ ಅಧಿವೇಶನದಲ್ಲಿ ಯಾವುದೇ ರೀತಿ ಉತ್ಸಾಹವನ್ನೂ ಕೂಡ ತೋರಿಸುತ್ತಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಸಂಪೂರ್ಣ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ನಡೆ ಸಾಕಷ್ಟು ಕುತೂಹಲ ಮೂಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/12/rameshB_vb_05.gif)