‘ಪಕ್ಷ ಬಿಟ್ಟರೂ ಸಿದ್ದರಾಮಯ್ಯ ನಮ್ಮ ಗುರು’ – ರಮೇಶ್ ಜಾರಕಿಹೊಳಿ

ಬೆಂಗಳೂರು :

     ‘ನಾವು ಕಾಂಗ್ರೆಸ್ ಪಕ್ಷವನ್ನು ಬಿಟ್ಟಿರಬಹುದು. ಆದರೆ, ಈಗಲೂ ಸಿದ್ದರಾಮಯ್ಯ ಅವರೇ ನಮ್ಮ ರಾಜಕೀಯ ಗುರು’ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿ ಹೊಳಿ ಹೇಳಿದ್ದಾರೆ.

     ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹೃದಯ ಸಂಬಂಧಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಚೇತರಸಿಕೊಳ್ಳುತ್ತಿದ್ದು, ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಲವು ಬಿಜೆಪಿ, ಕಾಂಗ್ರೆಸ್ ನಾಯಕರು ಆರೋಗ್ಯ ವಿಚಾರಿಸುತ್ತಿದ್ದಾರೆ.

      ಇಂದು ಮೈತ್ರಿ ಸರ್ಕಾರದಲ್ಲಿ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿದ್ದ ನೂತನ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಬಿ.ಸಿ. ಪಾಟೀಲ್ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

     ಈ ವೇಳೆ ರಮೇಶ್ ಅವರ ಕಾಲೆಳೆದ ಸಿದ್ದು, “ಏನಯ್ಯ ರಮೇಶ ಬಾ ಅಂದಾಗ ಬರಲಿಲ್ಲ, ಈಗ ಬಂದಿದ್ಯಲ್ಲ” ಎಂದು ಕಾಲೆಳೆದಿದ್ದಾರೆ. ಆಗ ರಮೇಶ್, “ನೀವು ನಮ್ಮ ನಾಯಕರು ನಿಮ್ಮ ಆರೋಗ್ಯ ಮುಖ್ಯ ನಮಗೆ ಅದಕ್ಕೆ ಬಂದೆ” ಎಂದು ಉತ್ತರಿಸಿದರು. 

      ಈ ವೇಳೆ ಮಾತನಾಡಿದ ರಮೇಶ್ ಜಾರಕಿಹೊಳಿ,ಉಪಚುನಾವಣೆಯಲ್ಲಿ ಗೆದ್ದಾಗಲೇ ಸಿದ್ದರಾಮಯ್ಯ ಅವರೇ ನಮ್ಮ ನಾಯಕರು ಎಂದು ಘೋಷಿಸಿದ್ದೆ. ಈಗಲೂ ಅದನ್ನೇ ಹೇಳುತ್ತೇನೆ. ನಾವು ಕಾಂಗ್ರೆಸ್ ಪಕ್ಷವನ್ನು ಬಿಟ್ಟಿರಬಹುದು, ಆದರೆ, ಈಗಲೂ ನಮ್ಮ ರಾಜಕೀಯ ಗುರು ಸಿದ್ದರಾಮಯ್ಯ ಅವರೇ, ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.  

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap