ಬೆಳಗಾವಿ :
ದೋಸ್ತಿ ಸರ್ಕಾರದ ವಿಧಾನಮಂಡಲ ಅಧಿವೇಶನ ಇಂದು ನಡೆಯಲಿದ್ದು, ಈ ನಡುವೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸದನಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ಸ್ಪೀಕರ್ ಗೆ ಪತ್ರ ಬರೆದಿದ್ದಾರೆ.
ಇಂದಿನಿಂದ ವಿಧಾನಸೌಧದಲ್ಲಿ ನಡೆಯಲಿರುವ ಅಧಿವೇಶನಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ವಿಪ್ ಜಾರಿ ಮಾಡಲಾಗಿದೆ. ಆದರೆ ರಮೇಶ್ ಜಾರಕಿಹೊಳಿ ಅವರು ನಿನ್ನೆ ಸಂಜೆ ಸ್ಪೀಕರ್ ರಮೇಶ್ ಕುಮಾರ್ ಗೆ ಪತ್ರ ಬರೆದು ವಿಷಯ ತಿಳಿಸಿದ್ದಾರೆ.
ಒಂದು ವೇಳೆ ವಿಪ್ ಉಲ್ಲಂಘನೆ ವಿಚಾರದಲ್ಲಿ ಕ್ರಮಕ್ಕೆ ಮುಂದಾದರೆ ತಕ್ಷಣ ಬೆಂಗಳೂರಿಗೆ ಬಂದು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/12/rameshB_vb_05-1.gif)