ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವ ಶ್ರೀರಾಮುಲು ನಿನ್ನೆ ಮಧ್ಯರಾತ್ರಿ ಭೇಟಿ ನೀಡಿ ವಾಸ್ತವ್ಯ ಹೂಡಿದ್ದಾರೆ.
ಆರೋಗ್ಯ ಸಚಿವರು ಭೇಟಿ ನೀಡಲಿದ್ದಾರೆ ಎಂದು ವಿಷಯ ತಿಳಿದ ನಂತರ ಆಸ್ಪತ್ರೆ ಸಿಬ್ಬಂದಿ ಸಚಿವರಿಗೆ ಕಾಯುತ್ತಿದ್ದರು. ಮಧ್ಯರಾತ್ರಿ ಶ್ರೀರಾಮುಲು ಅವರು ಆಸ್ಪತ್ರೆಗೆ ಬಂದರು.
ಮೈಸೂರು ಹಾಗೂ ಹೆಚ್.ಡಿ. ಕೋಟೆ ಕಾರ್ಯಕ್ರಮದಿಂದ ತಡರಾತ್ರಿ 12 ಗಂಟೆಗೆ ಬಂದ ಕಾರಣ ಜಿಲ್ಲಾಸ್ಪತ್ರೆಯ ಕುಂದು ಕೊರತೆಗಳನ್ನ ರೋಗಿಗಳಿಂದಲೇ ಆಲಿಸಲು ಸಾಧ್ಯವಾಗದೆ ವಾಸ್ತವ್ಯ ಹೂಡಿ ಬೆಳಗ್ಗೆ ಸಮಸ್ಯೆಗಳನ್ನು ವಿಚಾರಿಸುವುದಾಗಿ ಆರೋಗ್ಯ ಸಚಿವ ಬಿ.ಶ್ರೀರಾಮುಲ ತಿಳಿಸಿದರು.
ಬೆಳಿಗ್ಗೆ 6ಕ್ಕೆ ಎಚ್ಚರವಾದ ಬಳಿಕ ಬೋವಿಗುರುಪೀಠಕ್ಕೆ ತೆರಳಿದ ಅವರು, ಬೋವಿ ಮಠದಲ್ಲಿ ಶಿವಲಿಂಗ ಪೂಜೆ ಸಲ್ಲಿಸಿ ನಂತರ ಬೆಳಿಗ್ಗೆ 9 ಗಂಟೆಗೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮುಂದುವರೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
