ಬೆಂಗಳೂರು:
ಮುನಿರತ್ನ ಯಾರಿಗೂ ತಿಳಿಸದೇ ಏಕಾಏಕಿ ಮಾಧ್ಯಮಗಳ ಮುಂದೆ ಹೋಗಿದ್ದು ಮತ್ತು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು ರೆಬೆಲ್ ಶಾಸಕರ ಕಣ್ಣನ್ನು ಕೆಂಪಗಾಗಿಸಿದೆ.
ಶಾಸಕರ ಅನರ್ಹತೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೂ ಯಾರೂ ಕೂಡ ಬಹಿರಂಗ ಹೇಳಿಕೆ ಕೊಡಬಾರದು ಎಂದು ಎಲ್ಲಾ ಅನರ್ಹ ಶಾಸಕರಿಗೂ ದೂರವಾಣಿ ಕರೆ ಮಾಡಿ ಮಾತನಾಡಿರುವ ರಮೇಶ್ ಜಾರಕಿಹೊಳಿ, ಸುಪ್ರೀಂ ಕೋರ್ಟ್ನ ತೀರ್ಪು ಬಂದ ಬಳಿಕ ಒಟ್ಟಿಗೆ ಸೇರಿ ಸುದ್ದಿಗೋಷ್ಠಿ ಮಾಡೋಣ. ಅಲ್ಲಿಯವರೆಗೂ ಯಾರೂ ಕೂಡ ಮಾಧ್ಯಮಗಳ ಮುಂದೆ ಹೋಗೋದು ಬೇಡ ಎಂದು ಕಟ್ಟಪ್ಪಣೆ ನೀಡಿದ್ದರು ಎನ್ನಲಾಗಿದೆ.
ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚಿಸಿದ್ದಾರೆ ಎಂಬುದನ್ನು ಖಚಿತ ಪಡಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಉಳಿದ ಅನರ್ಹರಿಗೆ ಫೋನ್ ಮಾಡಿ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಡಿಕೆಶಿಯವರನ್ನು ಭೇಟಿಯಾಗುವ ಅಗತ್ಯ ಏನಿತ್ತು ಅಂತ ಮುನಿರತ್ನರಿಗೆ ಕರೆ ಮಾಡಿ ಶಾಸಕರು ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ