BSY ಸಿಎಂ ಆಗುವವರೆಗೂ ರೆಬೆಲ್ಸ್ ಗಳಿಗೆ ರೆಸಾರ್ಟ್ ವಾಸ್ತವ್ಯ.!?

ಬೆಂಗಳೂರು:

      ಯಡಿಯೂರಪ್ಪ ರವರು ಮುಖ್ಯಮಂತ್ರಿಯಾಗುವವರೆಗೂ ಅತೃಪ್ತ ಶಾಸಕರು ಮುಂಬೈನಲ್ಲಿಯೇ ಇರುತ್ತಾರೆ. ಬೆಂಗಳೂರಿಗೆ ಬರಲ್ಲ ಎಂದು ಬಿಜೆಪಿ ನಾಯಕ ಶ್ರೀರಾಮುಲು ಹೇಳಿದ್ಧಾರೆ.

      ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತೃಪ್ತರ ಅನರ್ಹತೆ ಇನ್ನೂ ನಿರ್ಧಾರ ಆಗಿಲ್ಲ. ಹೈಕಮಾಂಡ್ ಸೂಚನೆ ನಂತರ ಬಿಎಸ್‌ವೈ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡ್ತಾರೆ ಎಂದರು. ಬಿಎಸ್​ವೈ ಸಿಎಂ ಆಗುವವರೆಗೆ ರೆಬೆಲ್ ಶಾಸಕರ ಮುಂಬೈ ರೆಸಾರ್ಟ್​​ ವಾಸ್ತವ್ಯ ಮುಂದುವರಿಯಲಿದೆ ಎಂದಿದ್ದಾರೆ. 

      ಇನ್ನು ತಮಗೆ ಡಿಸಿಎಂ ಹುದ್ದೆ ನೀಡುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀರಾಮುಲು, ನಾನೊಬ್ಬ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ. ರಾಷ್ಟ್ರೀಯ ಅಧ್ಯಕ್ಷರು, ಯಡಿಯೂರಪ್ಪ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಹೇಳಿದರು. 

     “ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು  ಡಿಕೆ ಶಿವಕುಮಾರ್ ಹತಾಶೆಯಿಂದ ಕೆಲವು ವಿಚಾರಗಳನ್ನು ಹರಿಬಿಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯಲ್ಲ. ಡಿಕೆಶಿ ಬಗ್ಗೆ ನನಗೆ ಗೌರವ ಇದೆ,” ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap