ಬೆಂಗಳೂರು:
ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಜನಾರ್ದನ ರೆಡ್ಡಿಗೆ ಮತ್ತಷ್ಟು ಆತಂಕ ಎದುರಾಗಿದೆ. ರೆಡ್ಡಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಲಾಗಿದೆ.
ಆಂಬಿಡೆಂಟ್ ಪ್ರಕರಣದಲ್ಲಿ ಲಂಚ ಪಡೆದ ಹಾಗೂ ಈಡಿದ ಆರೋಪವನ್ನು ಸಿಸಿಬಿ ಮಾಡಿತ್ತು. ಮತ್ತು ಅವರ ಬಂಧನಕ್ಕೆ ಬಲೆ ಬೀಸಿತ್ತು. ರೆಡ್ಡಿ ಅವರ ಬೆಂಗಳೂರು ಹಾಗೂ ಬಳ್ಳಾರಿಯ ಮನೆಗಳ ಮೇಲೆ ರೇಡ್ ಸಹ ಮಾಡಲಾಗಿತ್ತು.
ಆದರೆ, ಪ್ರಕರಣದಲ್ಲಿ ಮೇಲ್ನೋಟಕ್ಕೆ ಜನಾರ್ದನ ರೆಡ್ಡಿ ಅವರ ಬಂಧನ ಭೀತಿ ಕಾಣುತ್ತಿಲ್ಲ ಅಂತಾ ನ್ಯಾಯಾಧೀಶರು ಮೌಖಿಕ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಕೀಲರು ಮಧ್ಯಂತರ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ. ಅಲ್ಲದೇ, ನಿರೀಕ್ಷಣ ಜಾಮೀನು ವಿಚಾರಣೆಯನ್ನು ನ.12ಕ್ಕೆ ನ್ಯಾಯಾಲಯ ಮುಂದೂಡಿದೆ.
ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿದ ಕಾರಣ ಜನಾರ್ದನ ರೆಡ್ಡಿ ಅವರಿಗೆ ಬಂಧನದ ಭೀತಿ ಮುಂದುವರೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
