ಬೆಂಗಳೂರು :
ಬಹುಕೋಟಿ ಐಎಂಎ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ಗೆ ಜಾಮೀನು ಮಂಜೂರಾಗಿದೆ.
ರೋಷನ್ ಬೇಗ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ಜಾಮೀನು ಮಂಜೂರು ಮಾಡಬೇಕು. ಅವರು ತನಿಖೆಗೆ ಸಹಕರಿಸಿದ್ದಾರೆ. ಈಗಾಗಲೇ ತನಿಖೆ ಮುಕ್ತಾಯವಾಗಿದೆ ಎಂದು ರೋಷನ್ ಬೇಗ್ ಅವರ ಪರ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ವಾದಿಸಿದ್ದರು.
ರೋಷನ್ ಬೇಗ್ ಅವರ ವೈದ್ಯಕೀಯ ವರದಿಗಳನ್ನು ಪರಿಶೀಲಿಸಿದ ನ್ಯಾಯಾಲಯ ಅದನ್ನು ಪರಿಗಣಿಸಿ ಜಾಮೀನು ಮಂಜೂರು ಮಾಡಿತು. ರೋಷನ್ ಬೇಗ್ ಅವರು ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ. ಪ್ರಕರಣದ ಬಾಕಿ ಇರುವ ತನಿಖೆಗೂ ಸಹಕಾರ ನೀಡಬೇಕು. ಪ್ರತಿ 2 ಮತ್ತು 4ನೇ ಸೋಮವಾರ ಹಾಗೂ ಸೂಚನೆ ನೀಡಿದಾಗ ಹಾಜರಾಗಬೇಕು. ಮತ್ತೆ ಇದೇ ರೀತಿಯನ್ನು ತಪ್ಪನ್ನು ಮಾಡಬಾರದು. ಅವರು ಪಾಸ್ಪೋರ್ಟ್ಅನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸಬೇಕು. ತಮ್ಮ ವಿಳಾಸ ಬದಲಾದರೆ ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು ಎಂದು ನ್ಯಾಯಾಲಯ, ಇಬ್ಬರು ಶೂರಿಟಿ ಪಡೆದು ಜಾಮೀನು ಮಂಜೂರು ಮಾಡಿದೆ.
ರೋಷನ್ ಬೇಗ್ ವಿರುದ್ಧ ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಅಲಿ ಖಾನ್ ಆರೋಪ ಮಾಡಿದ್ದರು. ಐಎಂಎನಿಂದ ರೋಷನ್ ಬೇಗ್ ಕೋಟ್ಯಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ