ಕೊಪ್ಪಳ:
ವ್ಯವಸ್ಥಿತವಾಗಿ ಪ್ರಚಾರ ನಡೆಸದ ಹಿನ್ನಲೆಯಲ್ಲಿ ಕೊಪ್ಪಳ ಜಿಲ್ಲಾ ಬಿಜೆಪಿ ಮುಖಂಡರಿಗೆ ಆರ್.ಎಸ್.ಎಸ್. ಮುಖಂಡರು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಗುರುವಾರ ರಾತ್ರಿ ನಗರದ ಖಾಸಗಿ ಹೋಟೆಲಿನಲ್ಲಿ ಆರ್ಎಸ್ಎಸ್ ಮುಖಂಡರಾದ ದತ್ತಾತ್ರೇಯ ವಜ್ರಳ್ಳಿ, ಅಯ್ಯನಗೌಡ್ರು ಹೇರೂರು ಜಿಲ್ಲೆಯ ಬಿಜೆಪಿಯ ಪ್ರಮುಖ ನಾಯಕರ ಜೊತೆ ನಡೆದ ಗೌಪ್ಯ ಸಭೆ ನಡೆಸಿದ್ದಾರೆ. ಈ ವೇಳೆ ಚುನಾವಣೆಗೆ ಯಾವೆಲ್ಲ ರೀತಿ ಸಿದ್ಧತೆ ನಡೆದಿದೆ ಎಂದು ಪ್ರಶ್ನಿಸಿದ್ದಾರೆ. ಸರಿಯಾಗಿ ಸಿದ್ಧತೆ ಮಾಡಿಕೊಳ್ಳದ್ದಕ್ಕೆ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಸೇರಿದಂತೆ ಪಕ್ಷದ ಮುಖಂಡರಿಗೆ ಆರ್.ಎಸ್.ಎಸ್. ಮುಖಂಡರು ಕ್ಲಾಸ್ ತೆಗೆದುಕೊಂಡಿದ್ದಾರೆ.
ಚುನಾವಣೆಯಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ವ್ಯವಸ್ಥಿತ ಪ್ರಚಾರ ನಡೆಸಿಲ್ಲ. ಸರಿಯಾಗಿ ಸಿದ್ಧತೆ ಮಾಡಿಕೊಳ್ಳದ್ದಕ್ಕೆ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಸೇರಿದಂತೆ ಪಕ್ಷದ ಮುಖಂಡರಿಗೆ ಆರ್.ಎಸ್.ಎಸ್. ಮುಖಂಡರು ಕ್ಲಾಸ್ ತೆಗೆದುಕೊಂಡಿದ್ದಾರೆ. ನಿಮಗೆ ಪ್ರಚಾರ ಮಾಡಿಸಲು ಆಗದಿದ್ದರೆ ಹೇಳಿ. ನಾವು ನಮ್ಮ ಸ್ವಯಂಸೇವಕರಿಂದ ಪ್ರಚಾರ ಮಾಡಿಸುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬಿಜೆಪಿ ಮುಖಂಡರು, ರಾತ್ರೋರಾತ್ರಿ ಬ್ಯಾಲೆಟ್ ಪೇಪರ್ ಪ್ರಿಂಟ್ ಮಾಡಿಸಿ ಹಂಚಿಕೆ ಮಾಡಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
