ಬೆಂಗಳೂರು:
ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ತಿಪ್ಪೇಸ್ವಾಮಿ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದಿಂದ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ಬಿ.ಜೆ.ಪಿ. ವಿರುದ್ಧ ಮುನಿಸಿಕೊಂಡಿದ್ದ ಮಾಜೀ ಶಾಸಕ ಎಸ್. ತಿಪ್ಪೇಸ್ವಾಮಿ ಅವರು ಇಂದು ಬೆಂಗಳೂರಿನಲ್ಲಿರುವ ಪ್ರದೇಶ ಕಾಂಗ್ರೆಸ್ ಕಛೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
"Sriramulu who has won 3 times from Molakalmuru has done nothing there. He has no other choice but to give up on Molakalmuru &contest from elsewhere. He has lost his place in Bellary & is no longer fit to stand for elections from there.": @KPCCPresident Shri. @dineshgrao
— Karnataka Congress (@INCKarnataka) March 1, 2019
2013ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ನಂತರ 2018ರಲ್ಲಿ ಬಂಡಾಯವೆದ್ದು ಮೊಳಕಾಲ್ಮೂರು ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು.
ಪಕ್ಷ ಸೇರ್ಪಡೆಯಾದ ತಿಪ್ಪೇಸ್ವಾಮಿ ಮಾತನಾಡಿ, ಶ್ರೀರಾಮುಲು ಅವರು ಮನೆ ದೇವರ ಮೇಲೆ ಆಣೆ ಮಾಡಿ ತಿಪ್ಪೇಸ್ವಾಮಿ ಅವರೇ ಮೊಳಕಾಲ್ಮೂರು ಕ್ಷೇತ್ರದ ಅಭ್ಯರ್ಥಿ ಎಂದು ಹೇಳಿದ್ದರು. ನಾಮಪತ್ರ ಸಲ್ಲಿಕೆಯ ಕೊನೆ ದಿನ ಬಂದು ನಾನೇ ಅಭ್ಯರ್ಥಿ ಎಂದರು. ತಮಗೆ ಸೀಟು ಸಿಗದೇ ಇರುವುದಕ್ಕೆ ಶ್ರೀರಾಮುಲು ಅವರೇ ಕಾರಣ ಎಂದು ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
