ಬೆಂಗಳೂರು :
ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ಸಿಸಿಬಿಯಿಂದ ನಿನ್ನೆ ರಾತ್ರಿ ಬಂಧನಕ್ಕೊಳಗಾಗಿರುವ ಮಾಜಿ ಮೇಯರ್ ಸಂಪತ್ ರಾಜ್’ಗೆ 2 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ನೀಡಲಾಗಿದೆ.
ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ತಲೆ ಮರೆಸಿಕೊಂಡಿದ್ದಂತ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್, ಕೊರೋನಾ ಸೋಂಕು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ, ಅಲ್ಲಿಂದ ಬಂಧನ ಭೀತಿಯಿಂದ ನಾಪತ್ತೆಯಾಗಿದ್ದರು. ತಲೆ ಮರೆಸಿಕೊಂಡಿದ್ದಂತ ಆರೋಪಿ ಸಂಪತ್ ರಾಜ್ ಬಂಧನ ಕುರಿತಂತೆ ಹೈಕೋರ್ಟ್ ಪೊಲೀಸರಿಗೆ ಚಾಟಿ ಬೀಸಿತ್ತು.
ಹೀಗಾಗಿ ತಮ್ಮ ತನಿಖೆಯ ವೇಗ ಹೆಚ್ಚಿಸಿದ ಸಿಸಿಬಿ ಅಧಿಕಾರಿಗಳು ನಿನ್ನೆ ಮಧ್ಯರಾತ್ರಿ ಬೆಂಗಳೂರಿನಲ್ಲಿಯೇ ಬಂಧಿಸಿದ್ದರು. ಇದೀಗ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ನಗರದ 67ನೇ ಸಿಸಿಹೆಚ್ ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದಂತ 67ನೇ ಸಿಸಿಹೆಚ್ ಕೋರ್ಟ್ ನ್ಯಾಯಾಧೀಶರು, 2 ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ, ಆದೇಶಿಸಿದ್ದಾರೆ. ಹೀಗಾಗಿ ಮಾಜಿ ಮೇಯರ್ ಸಂಪತ್ ರಾಜ್ ಜೈಲು ಸೇರುವಂತಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/11/Sampath-raj.jpg)