ಬೆಂಗಳೂರು :
ಕೊರೊನಾ ಮಹಾಮಾರಿ ಇದೀಗ ಸಿನಿರಂಗಕ್ಕೂ ಲಗ್ಗೆ ಇಟ್ಟಿದ್ದು, ಇದೀಗ ನಟ ಶ್ರೀನಗರ ಕಿಟ್ಟಿ ಸಹೋದರ ಶಿವಶಂಕರ್ ಕೊರೊನಾಗೆ ಬಲಿಯಾಗಿದ್ದಾರೆ.
ಹೌದು, ಕೊರೊನಾ ಸೋಂಕಿನಿಂದ ಸ್ಯಾಂಡಲ್ ವುಡ್ ನಟ ಶ್ರೀನಗರ ಕಿಟ್ಟಿ ಸಹೋದರ ಶಿವಶಂಕರ್ ಜೂನ್ 29 ರಂದು ಹೃದಯಾಘಾತದಿಂದ ನಿಧನರಾಗಿದ್ದರು. ತಡವಾಗಿ ಬೆಳಕಿಗೆ ಬಂದಿದೆ.
ನಂತರ ಮೃತದೇಹದಿಂದ ಗಂಟಲು ದ್ರವ ತೆಗೆದು ಕೋವಿಡ್-19 ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಯಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಸಹೋದರನಿಗೆ ಕೊರೊನಾ ಇರುವುದು ಧೃಡಪಟ್ಟ ಬೆನ್ನಲ್ಲೇ ಇಡೀ ಕುಟುಂಬ ಕೋವಿಡ್ ಟೆಸ್ಟ್ ಮಾಡಿಸಲಾಗಿದೆ. ಎಲ್ಲರದ್ದು ನೆಗಟಿವ್ ರಿಪೋರ್ಟ್ ಬಂದಿದೆ. ಆದರೂ ಕೂಡ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿರಲಿದೆ ಕುಟುಂಬ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/07/Srinagar-kitty.jpg)